ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ನಾಲೆಯೊಂದಕ್ಕೆ ಬಿದ್ದಿದ್ದ ಕಾಡಾನೆಯನ್ನು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಲಾಯಿತು.
ಶಿವನಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ನವೆಂಬರ್.15ರಂದು ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಳೆಗೆ ಇಳಿದಿತ್ತು. ಅಲ್ಲಿ ನೀರಿನ ಹರಿವಿನ ರಭಸ ಹೆಚ್ಚಾಗಿದ್ದರಿಂದ ಅಲ್ಲಿ ಮರಳಿ ಬರಲು ಸಾಧ್ಯವಾಗಿರಲಿಲ್ಲ.
ಈ ವೇಳೆ ಆನೆ ಕಾಣದಿರುವುದನ್ನು ಗಮನಿಸಿದ ಅಧಿಕಾರಿಗಳಿಗೆ ಆನೆ ನಾಲೆಗೆ ಇಳಿದಿರುವ ವಿಷಯ ಗೊತ್ತಾಗಿದೆ. ಸಂಜೆವರೆಗೂ ಕಾದರೂ ಆನೆ ಮೇಲಕ್ಕೆ ಬರಲಿಲ್ಲ.
ಸ್ಥಳಕ್ಕೆ ಡಿಸಿಎಫ್ ರಘು ಹಾಗೂ ವನ್ಯಜೀವಿ ವಲಯ ಮೈಸೂರು ವಿಭಾಗದ ಡಿಸಿಎಫ್ ಪ್ರಭು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ನಾಲೆಯ ನೀರಿನ ಪ್ರಮಾಣವನ್ನು ತಗ್ಗಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಪ್ರಾರಂಭದಲ್ಲಿ ಅಧಿಕಾರಿಗಳು ಆನೆಗೆ ಅಹಾರ ನೀಡಿ, ಗನ್ನಲ್ಲಿ ಶೂಟ್ ಮಾಡುವ ಮೂಲಕ ಅರವಳಿಕೆ ಮದ್ದು ನೀಡಿದ್ದರು. ಆನೆ ಪ್ರಜ್ಞೆ ತಪ್ಪಿದ ಬಳಿಕ ಕ್ರೇನ್ ಮೂಲಕ ಹಗ್ಗವನ್ನು ಕಟ್ಟಿ ಕಂಟೇನರ್ ಮೇಲೆ ಇಟ್ಟು ಆನೆಯನ್ನು ಮೇಲಕ್ಕೆ ಎತ್ತಲಾಯಿತು.
ಆನೆ ಸತತವಾಗಿ ನೀರಿನಲ್ಲಿದ್ದ ಕಾರಣ ಆನೆಯ ಸೊಂಡಿಲಿನ ತುದಿ ಬಿಳಿ ಬಣ್ಣಕ್ಕೆ ತಿರುಗಿದ್ದು ಕಾಲಿಗೆ ಫಂಗಸ್ ಆಗಿರುವ ಸಾಧ್ಯತೆಯಿದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…