ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ ನಡೆದಿದೆ.
5 ಕಾಡಾನೆಗಳು ಕೆ.ಪಿ.ದೊಡ್ಡಿಯ ಮೂಲಕ ಗೊರವನಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿವೆ. ಕೆ.ಪಿ.ದೊಡ್ಡಿ ಗ್ರಾಮದ ಸಿದ್ದರಾಜು ಎಂಬವರ ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟು ಫಸಲನ್ನು ಸಂಪೂರ್ಣ ನಾಶಗೊಳಿಸಿವೆ.
ಇದನ್ನು ಕಂಡ ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಸಂಜೆ ಸ್ಥಳಕ್ಕೆ ಧಾವಿಸಿ ಸಿದ್ದರಾಜು ಅವರ ಜಮೀನಿನಲ್ಲಿ ಬೀಡುಬಿಟ್ಟಿದ್ದ 5 ಕಾಡಾನೆಗಳನ್ನು ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಓಡಿಸಲು ಮುಂದಾದಾಗ ಅಣ್ಣೂರು, ಕಾರ್ಕಹಳ್ಳಿ, ಕ್ಯಾತಘಟ್ಟ ಮಾರ್ಗವಾಗಿ ಗೊರವನಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ಬೀಡುಬಿಟ್ಟಿವೆ.
ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕೂಡಲೇ ಗ್ರಾಮಗಳಿಂದ ಕಾಡಿಗೆ ಓಡಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಜೊತೆಗೆ ಸಿದ್ದರಾಜು ಅವರ ಜಮೀನಿನಲ್ಲಿ ಬೆಳೆ ಫಸಲು ನಾಶವಾಗಿರುವ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…