ಮಂಡ್ಯ

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?. ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಚುನಾವಣೆಗೆ ನಿಲ್ಲಲಿ ನೋಡೋಣ? ಎಂದು ಮಾಜಿ ಶಾಸಕ ಕೆ.ಸುರೇಶ್‌ಗೌಡ ಸವಾಲು ಹಾಕಿದರು.

ಮಂಡ್ಯದಿಂದ ಜಾ.ದಳ ಕಿತ್ತೊಗೆಯಿರಿ ಎಂಬ ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದ ಅವರು, ಜಾ.ದಳ ಓಡಿಸುವಂತೆ ಚಲುವರಾಯಸ್ವಾಮಿ ಕರೆ ಕೊಟ್ಟಿದ್ದಾರೆ, ದೇವರು ಒಳ್ಳೆಯದನ್ನು ಮಾಡಲಿ. ಜಾ.ದಳ ಪಕ್ಷ ಅವರು ಬೆಳೆದು ಹೋಗಿರುವ ಪಕ್ಷ. ಇಂಥವರನ್ನು ನೋಡಿಯೇ ಕೆಲವು ಗಾದೆಗಳನ್ನು ಹಿರಿಯರು ಮಾಡಿದ್ದಾರೆ. ನಾನು ಕಾಂಗ್ರೆಸ್‌ನಲ್ಲಿದ್ದೆ, ಯಾವತ್ತೂ ಆ ಪಕ್ಷವನ್ನು ಬೈದಿಲ್ಲ. ಆ ಪಕ್ಷದಲ್ಲಿನ ನಾಯಕರ ನಡವಳಿಕೆ ವಿರುದ್ಧ ಮಾತ್ರ ಬೈದಿದ್ದೇನೆ ಎಂದರು.

ಪಕ್ಷದಿಂದ ಬಂದು ಮಂತ್ರಿ ಆಗಿ ಆ ಪಕ್ಷವನ್ನೇ ಬೈದರೆ ಹೇಗೆ?. ಜಾ.ದಳ ಓಡಿಸುವುಕ್ಕೆ ನಿನಗೆ ತಾಕತ್ ಇದ್ಯಾ? ಈಗ ರಾಜೀನಾಮೆ ಕೊಟ್ಟು ಚುನಾವಣೆಗೆ ನಿಲ್ಲಿ ನೋಡೋಣ?. ಮಂತ್ರಿ ಸ್ಥಾನ, ದುಡ್ಡು, ಸರ್ಕಾರ ಇದೆ. ಚುನಾವಣೆ ಮಾಡೋಣ. 2028ಕ್ಕೆ ಚುನಾವಣೆಯಲ್ಲಿ ತೋರಿಸುತ್ತೇವೆ. ಜಾ.ದಳ ಇರುತ್ತಾ?, ಕಾಂಗ್ರೆಸ್ ಇರುತ್ತಾ ನೋಡೋಣಾ?. ಇಂಥವರಿಂದಲೇ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ ಎಂದು ಕಿಡಿಕಾರಿದರು.

ಲೂಟಿಕೋರರಿಂದ ಇತಿಹಾಸ ಇರುವ ಕಾಂಗ್ರೆಸ್ ಪಕ್ಷ ಮುಳುಗುತ್ತಿದೆ. ಸಚಿವರಿಗೆ ಅಧಿಕಾರದ ಅಮಲು ಎರಡೂ ಕಣ್ಣು ನೆತ್ತಿಮೇಲೆ ಹೋಗಿದೆ. ಮಗನ ಪ್ರೋಮೊಷನ್‌ಗೆ ಅಧಿಕಾರಿಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಜನರು 2028ಕ್ಕೆ ಜಾ.ದಳ ಇರಬೇಕಾ? ಕಾಂಗ್ರೆಸ್ ಇರಬೇಕಾ ಎನ್ನುವ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮಾತನಾಡಬೇಕಾದರೆ ಎಚ್ಚರಿಕೆ ಇರಲಿ. ಹಣ, ಅಧಿಕಾರದ ಅಹಂಕಾರದಲ್ಲಿ ಹೆತ್ತ ತಾಯಿಗೆ, ಉಂಡ ಮನೆಗೆ ದ್ರೋಹ ಮಾಡಬಾರದು. ಜನ ಕೊಟ್ಟ ಅಧಿಕಾರವನ್ನು ಮಾರಿಕೊಂಡು ಬೇರೆ ಪಕ್ಷಕ್ಕೆ ಹೋದರೂ ಬುದ್ಧಿ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿತ್ರಕೂಟ ; ಮಂದಾಕಿನಿ ನದಿ ಪ್ರವಾಹ ಭೀತಿ

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…

13 mins ago

ನೇಪಾಳ ಪ್ರವಾಹ ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…

26 mins ago

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ…

2 hours ago

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

4 hours ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

4 hours ago

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

6 hours ago