ಮಂಡ್ಯ : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ.
ಆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರ ‘ಗಿಣಿ ಶಾಸ್ತ್ರ ಕೇಳಿ’ ಹೇಳಿಕೆಗೆ ಟಕ್ಕರ್ ನೀಡಿದ್ದಾರೆ.
ಮುಖ್ಯಮಂತ್ರಿ ವಿಚಾರಕ್ಕೆ ಬಿಜೆಪಿಯವರು ಗಿಣಿ ಶಾಸ್ತ್ರ ಕೇಳಿ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದರು. ಡಿಕೆಶಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು ಗಿಣಿ ಶಾಸ್ತ್ರ ಕೇಳಿ ಡಿಸಿಎಂಗೆ ತಿರುಗೇಟು ನೀಡಿದ್ದಾರೆ.
ಇದನ್ನು ಓದಿ: ಸಿದ್ದರಾಮಯ್ಯ, ಡಿಕೆಶಿ ಸಿಎಂ ಫೈಟ್ : ರೇಸ್ಗೆ ಮತ್ತೊಬ್ಬರ ಎಂಟ್ರಿ…!
ಮಂಡ್ಯದ ನಗರಸಭೆ ಎದುರು ಗಿಳಿ ಶಾಸ್ತ್ರ ಕೇಳಲಾಯಿತು. ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ, ಇಲ್ವಾ ಎಂದು ಬಿಜೆಪಿಗರು ಶಾಸ್ತ್ರ ಕೇಳಿದರು. ಈ ವೇಳೆ ಚೊಂಬು ಇರುವ ಕಾರ್ಡ್ನ್ನು ಗಿಣಿ ತೆಗೆದಿದೆ. ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲ್ಲ. ಅವರ ಕೈಗೆ ಚೊಂಬು ಎಂದು ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.
ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಶಾಸ್ತ್ರ ಕೇಳಿದಾಗ, ಈ ವೇಳೆ ಹೂ ಇರುವ ಕಾರ್ಡ್ ತೆಗೆದಿದೆ ಗಿಣಿ. ಸಿದ್ದರಾಮಯ್ಯ ಸಿಎಂ ಆಗಿದ್ರೆ ಜನರ ಕಿವಿಗೆ ಹೂ ಎಂದು ಬಿಜೆಪಿ ಕಾರ್ಯಕರ್ತರು ವಿಡಂಬನೆ ಮಾಡಿದ್ದಾರೆ.
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…