ಮಂಡ್ಯ : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ.
ಆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರ ‘ಗಿಣಿ ಶಾಸ್ತ್ರ ಕೇಳಿ’ ಹೇಳಿಕೆಗೆ ಟಕ್ಕರ್ ನೀಡಿದ್ದಾರೆ.
ಮುಖ್ಯಮಂತ್ರಿ ವಿಚಾರಕ್ಕೆ ಬಿಜೆಪಿಯವರು ಗಿಣಿ ಶಾಸ್ತ್ರ ಕೇಳಿ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದರು. ಡಿಕೆಶಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು ಗಿಣಿ ಶಾಸ್ತ್ರ ಕೇಳಿ ಡಿಸಿಎಂಗೆ ತಿರುಗೇಟು ನೀಡಿದ್ದಾರೆ.
ಇದನ್ನು ಓದಿ: ಸಿದ್ದರಾಮಯ್ಯ, ಡಿಕೆಶಿ ಸಿಎಂ ಫೈಟ್ : ರೇಸ್ಗೆ ಮತ್ತೊಬ್ಬರ ಎಂಟ್ರಿ…!
ಮಂಡ್ಯದ ನಗರಸಭೆ ಎದುರು ಗಿಳಿ ಶಾಸ್ತ್ರ ಕೇಳಲಾಯಿತು. ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ, ಇಲ್ವಾ ಎಂದು ಬಿಜೆಪಿಗರು ಶಾಸ್ತ್ರ ಕೇಳಿದರು. ಈ ವೇಳೆ ಚೊಂಬು ಇರುವ ಕಾರ್ಡ್ನ್ನು ಗಿಣಿ ತೆಗೆದಿದೆ. ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲ್ಲ. ಅವರ ಕೈಗೆ ಚೊಂಬು ಎಂದು ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.
ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಶಾಸ್ತ್ರ ಕೇಳಿದಾಗ, ಈ ವೇಳೆ ಹೂ ಇರುವ ಕಾರ್ಡ್ ತೆಗೆದಿದೆ ಗಿಣಿ. ಸಿದ್ದರಾಮಯ್ಯ ಸಿಎಂ ಆಗಿದ್ರೆ ಜನರ ಕಿವಿಗೆ ಹೂ ಎಂದು ಬಿಜೆಪಿ ಕಾರ್ಯಕರ್ತರು ವಿಡಂಬನೆ ಮಾಡಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…