ಮಂಡ್ಯ : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ.
ಆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರ ‘ಗಿಣಿ ಶಾಸ್ತ್ರ ಕೇಳಿ’ ಹೇಳಿಕೆಗೆ ಟಕ್ಕರ್ ನೀಡಿದ್ದಾರೆ.
ಮುಖ್ಯಮಂತ್ರಿ ವಿಚಾರಕ್ಕೆ ಬಿಜೆಪಿಯವರು ಗಿಣಿ ಶಾಸ್ತ್ರ ಕೇಳಿ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದರು. ಡಿಕೆಶಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು ಗಿಣಿ ಶಾಸ್ತ್ರ ಕೇಳಿ ಡಿಸಿಎಂಗೆ ತಿರುಗೇಟು ನೀಡಿದ್ದಾರೆ.
ಇದನ್ನು ಓದಿ: ಸಿದ್ದರಾಮಯ್ಯ, ಡಿಕೆಶಿ ಸಿಎಂ ಫೈಟ್ : ರೇಸ್ಗೆ ಮತ್ತೊಬ್ಬರ ಎಂಟ್ರಿ…!
ಮಂಡ್ಯದ ನಗರಸಭೆ ಎದುರು ಗಿಳಿ ಶಾಸ್ತ್ರ ಕೇಳಲಾಯಿತು. ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ, ಇಲ್ವಾ ಎಂದು ಬಿಜೆಪಿಗರು ಶಾಸ್ತ್ರ ಕೇಳಿದರು. ಈ ವೇಳೆ ಚೊಂಬು ಇರುವ ಕಾರ್ಡ್ನ್ನು ಗಿಣಿ ತೆಗೆದಿದೆ. ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲ್ಲ. ಅವರ ಕೈಗೆ ಚೊಂಬು ಎಂದು ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.
ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಶಾಸ್ತ್ರ ಕೇಳಿದಾಗ, ಈ ವೇಳೆ ಹೂ ಇರುವ ಕಾರ್ಡ್ ತೆಗೆದಿದೆ ಗಿಣಿ. ಸಿದ್ದರಾಮಯ್ಯ ಸಿಎಂ ಆಗಿದ್ರೆ ಜನರ ಕಿವಿಗೆ ಹೂ ಎಂದು ಬಿಜೆಪಿ ಕಾರ್ಯಕರ್ತರು ವಿಡಂಬನೆ ಮಾಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…