ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿಯ ಲಿಂಗಾಪುರದಲ್ಲಿ ಬುಧವಾರ ( ಮಾರ್ಚ್ 20 ) ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ. ಗ್ರಾಮದ ರಾಜೇಂದ್ರ ಹಾಗೂ ಮಂಜುಳ ದಂಪತಿಯ ತೃತೀಯ ಪುತ್ರಿ ಪ್ರೇಮಕುಮಾರಿ ( 26 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮೃತಳ ತಾಯಿ ಮಂಜುಳಾ ಕಿಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೈಸೂರಿನ ಎನ್ಆರ್ ಮೊಹಲ್ಲಾದ ಕುಮಾರಸ್ವಾಮಿ ಎಂಬುವವರ ಪುತ್ರ ರಾಘವೇಂದ್ರ ಎಂಬಾತನಿಗೆ ಎರಡು ವರ್ಷಗಳ ಹಿಂದೆ ತಮ್ಮ ಮಗಳನ್ನು ಮದುವೆ ಮಾಡಿಕೊಡಲಾಗಿತ್ತು. ವಿವಾಹದ ವೇಳೆ 150 ಗ್ರಾಂ ಚಿನ್ನ ಹಾಗೂ 5 ಲಕ್ಷ ರೂಪಾಯಿಗಳನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಆರಂಭದಲ್ಲಿ ಚೆನ್ನಾಗಿದ್ದರು. ಆದರೆ ತದನಂತರ ತವರಿನಿಂದ ಮತ್ತಷ್ಟು ಹಣ ತರಲು ಕಿರುಕುಳ ನೀಡಲಾರಂಭಿಸಿದ್ದರು. ಈ ಸಂಬಂಧ ಸಾಕಷ್ಟು ರಾಜಿ, ಪಂಚಾಯಿತಿ ನಡೆದಿದ್ದರೂ ಪ್ರಯೋಜನವಾಗಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…