ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿಯ ಲಿಂಗಾಪುರದಲ್ಲಿ ಬುಧವಾರ ( ಮಾರ್ಚ್ 20 ) ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ. ಗ್ರಾಮದ ರಾಜೇಂದ್ರ ಹಾಗೂ ಮಂಜುಳ ದಂಪತಿಯ ತೃತೀಯ ಪುತ್ರಿ ಪ್ರೇಮಕುಮಾರಿ ( 26 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮೃತಳ ತಾಯಿ ಮಂಜುಳಾ ಕಿಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೈಸೂರಿನ ಎನ್ಆರ್ ಮೊಹಲ್ಲಾದ ಕುಮಾರಸ್ವಾಮಿ ಎಂಬುವವರ ಪುತ್ರ ರಾಘವೇಂದ್ರ ಎಂಬಾತನಿಗೆ ಎರಡು ವರ್ಷಗಳ ಹಿಂದೆ ತಮ್ಮ ಮಗಳನ್ನು ಮದುವೆ ಮಾಡಿಕೊಡಲಾಗಿತ್ತು. ವಿವಾಹದ ವೇಳೆ 150 ಗ್ರಾಂ ಚಿನ್ನ ಹಾಗೂ 5 ಲಕ್ಷ ರೂಪಾಯಿಗಳನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಆರಂಭದಲ್ಲಿ ಚೆನ್ನಾಗಿದ್ದರು. ಆದರೆ ತದನಂತರ ತವರಿನಿಂದ ಮತ್ತಷ್ಟು ಹಣ ತರಲು ಕಿರುಕುಳ ನೀಡಲಾರಂಭಿಸಿದ್ದರು. ಈ ಸಂಬಂಧ ಸಾಕಷ್ಟು ರಾಜಿ, ಪಂಚಾಯಿತಿ ನಡೆದಿದ್ದರೂ ಪ್ರಯೋಜನವಾಗಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…