ಮಂಡ್ಯ

ಮಂಡ್ಯ: ಮಹಿಳೆ ಆತ್ಮಹತ್ಯೆ; ವರದಕ್ಷಿಣೆ ಕಿರುಕುಳ ದೂರು ದಾಖಲು

ಮಂಡ್ಯ: ಜಿಲ್ಲೆಯ ಕಿಕ್ಕೇರಿ ಹೋಬಳಿಯ ಲಿಂಗಾಪುರದಲ್ಲಿ ಬುಧವಾರ ( ಮಾರ್ಚ್‌ 20 ) ಸಂಜೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ. ಗ್ರಾಮದ ರಾಜೇಂದ್ರ ಹಾಗೂ ಮಂಜುಳ ದಂಪತಿಯ ತೃತೀಯ ಪುತ್ರಿ ಪ್ರೇಮಕುಮಾರಿ ( 26 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಮೃತಳ ತಾಯಿ ಮಂಜುಳಾ ಕಿಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೈಸೂರಿನ ಎನ್‌ಆರ್‌ ಮೊಹಲ್ಲಾದ ಕುಮಾರಸ್ವಾಮಿ ಎಂಬುವವರ ಪುತ್ರ ರಾಘವೇಂದ್ರ ಎಂಬಾತನಿಗೆ ಎರಡು ವರ್ಷಗಳ ಹಿಂದೆ ತಮ್ಮ ಮಗಳನ್ನು ಮದುವೆ ಮಾಡಿಕೊಡಲಾಗಿತ್ತು. ವಿವಾಹದ ವೇಳೆ 150 ಗ್ರಾಂ ಚಿನ್ನ ಹಾಗೂ 5 ಲಕ್ಷ ರೂಪಾಯಿಗಳನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಆರಂಭದಲ್ಲಿ ಚೆನ್ನಾಗಿದ್ದರು. ಆದರೆ ತದನಂತರ ತವರಿನಿಂದ ಮತ್ತಷ್ಟು ಹಣ ತರಲು ಕಿರುಕುಳ ನೀಡಲಾರಂಭಿಸಿದ್ದರು. ಈ ಸಂಬಂಧ ಸಾಕಷ್ಟು ರಾಜಿ, ಪಂಚಾಯಿತಿ ನಡೆದಿದ್ದರೂ ಪ್ರಯೋಜನವಾಗಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

23 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago