ಕಿಕ್ಕೇರಿ: ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಿಕ್ಕೇರಿ ಹೋಬಳಿಯ ಲಕ್ಷ್ಮೀಪುರ ಗ್ರಾಮದಲ್ಲಿ ನಿನ್ನೆ ( ಮೇ 24 ) ಬೆಳಿಗ್ಗೆ ನಡೆದಿದೆ.
ಗ್ರಾಮದ ಗಾಯತ್ರಮ್ಮ (45) ಎಂಬ ಮಹಿಳೆಯೇ ಮೃತಪಟ್ಟವರು. ಗಾಯತ್ರಮ್ಮ ಅವರು ಶುಕ್ರವಾರ ಬೆಳಗ್ಗೆ 6.30ರ ಸಮಯದಲ್ಲಿ ಗ್ರಾಮದ ಪಕ್ಕದಲ್ಲೇ ಇದ್ದ ತಮ್ಮ ಜಮೀನಿಗೆ ಹೋದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತಿಳಿಯದೇ ತುಳಿದಿದ್ದು, ಇದರಿಂದ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಕಿಕ್ಕೇರಿ ಪೋಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರೇವತಿ ಮತ್ತು ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನು ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ, ವಾರಸುದಾರರಿಗೆ ನೀಡಿದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…