ಮಂಡ್ಯ: ನೋಟಿಸ್ ಕೊಡಲು ಬಂದ ಕೋರ್ಟ್ ಅಮೀನ್ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ.
ಅಪಘಾತ ಪ್ರಕರಣ ಸಂಬಂಧ ನೋಟಿಸ್ ಕೊಡಲು ಬಂದಿದ್ದ ಅಮೀನ್ಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿದ್ದಾರೆ. ಕೆ.ಆರ್.ಪೇಟೆ ಪಟ್ಟಣದ ಸಿವಿಲ್ ಕೋರ್ಟ್ ಅಮೀನ್ ಶಂಕರೇಗೌಡ ಕಣ್ಣಿಗೆ ಸಾಕಮ್ಮ ಎಂಬುವವರು ಖಾರದಪುಡಿ ಎರಚಿದ್ದಾರೆ.
ಇನ್ನು ಪೊಲೀಸರಿಗೂ ಮಾಹಿತಿ ನೀಡದೇ ಅಮೀನ್ ಸ್ಥಳಕ್ಕೆ ಹೋಗಿದ್ದರು ಎನ್ನಲಾಗಿದ್ದು, ಚಿಕ್ಕಮಗಳೂರಿನಲ್ಲಿ ನಡೆದ ಅಪಘಾತ ಪ್ರಕರಣ ಸಂಬಂಧ ನೋಟಿಸ್ ಕೊಡಲು ಹೋಗಿದ್ದರು.
ವಾಹನ ಮಾಲೀಕನ ಜೊತೆಗೆ ನೇರವಾಗಿ ಕೋರ್ಟ್ ಅಮೀನ್ ತೆರಳಿದ್ದರು. ಸದ್ಯ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಖಾರದಪುಡಿ ಎರಚುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…