died trAacter
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಮತಾ (35) ಮೃತ ಮಹಿಳೆಯಾಗಿದ್ದಾರೆ.
ಘಟನೆ ವಿವರ :
ಪಾಲಹಳ್ಳಿ ಗ್ರಾಮದ ಬಳಿ ಇರುವ ಕ್ಯೂಟ್ ರೆಸಾರ್ಟ್ ಬಳಿಯ ವರುಣ ನಾಲೆಗೆ ಮಹಿಳೆ ಬಟ್ಟೆ ತೊಳೆಯಲು ಬಂದಿದ್ದಾರೆ. ಆದರೆ, ಕಾಲುವೆಯಲ್ಲಿ ಕೊಲೆಯಾಗಿ ಮೃತಪಟ್ಟಿರುವ ರೀತಿಯಲ್ಲಿ ಶವ ಪತ್ತೆ ಆಗಿದೆ. ಶವದ ಮೈಯಲ್ಲಿದ್ದ ಚಿನ್ನದ ಸರ, ತಾಳಿಸರ ಕಿವಿಯಲ್ಲಿದ್ದ ಓಲೆ ಬಲವಂತವಾಗಿ ಕಿತ್ತುಕೊಂಡ ಸ್ಥಿತಿಯಲ್ಲಿ ಕಂಡುಬಂದಿದೆ. ಮೇಲ್ನೋಟಕ್ಕೆ ಯಾರೋ ದುಷ್ಕರ್ಮಿಗಳು ಚಿನ್ನಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿರುವ ರೀತಿಯಲ್ಲಿದೆ ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…