ಮಂಡ್ಯ

ಆಚರಣೆ, ಮೌಢ್ಯತೆಯಿಂದ ಹೆಣ್ಣನ್ನು ಹೊರತರಬೇಕು : ನಟಿ ಅಕ್ಷತಾ ಪಾಂಡವಪುರ ಅಭಿಪ್ರಾಯ

ಮಂಡ್ಯ : ಹೆಣ್ಣು ಮಕ್ಕಳನ್ನು ಮಾಡೆಲ್‌ ರೀತಿ ಸಮಾಜದಲ್ಲಿ ಮಾಡಿಬಿಟ್ಟಿರುವುದರಿಂದ ಅದನ್ನು ಬದಲಾಯಿಸಿ ಅವಳಿಗೂ ಸ್ವಾತಂತ್ರ್ಯ ನೀಡಿ ಆಚರಣೆ ಮತ್ತು ಮೌಢ್ಯತೆಯಿಂದ ಹೊರಗೆ ಬರುವಂತೆ ಮಾಡಬೇಕಿದೆ ಎಂದು ನಟಿ ಅಕ್ಷತಾ ಪಾಂಡವಪುರ ಹೇಳಿದರು.

ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಸಹಯೋಗದಲ್ಲಿ ಶನಿವಾರ ಆರಂಭವಾದ ದುಡಿಯುವ ಮಹಿಳೆಯರ ೯ನೇ ರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಆಚರಣೆ, ಸಂಪ್ರದಾಯದಲ್ಲಿ ಸಿಲುಕಿಕೊಳ್ಳುವವರೇ ಹೆಣ್ಣು ಮಕ್ಕಳನ್ನು ಕಟ್ಟಿ ಹಾಕಿದ್ದಾರೆ. ಮದುವೆಯಾಗುವ ಹೆಣ್ಣು ಮಕ್ಕಳಿಗೆ ಮುತೈದೆಯಾಗಿ ಬಾಳಮ್ಮಾ ಎನ್ನುವ ಅರ್ಥವೇ ಬೇಗ ಸಾವು ಬರಲಿ ಅಂತಾ? ಆದರೆ ಗಂಡು ಮಕ್ಕಳಿಗೆ ಮಾತ್ರ ಈ ಮಾತು ಹೇಳುವುದಿಲ್ಲ. ಮಹಿಳೆಯರು ‘ವಿಧವೆ ಸ್ಥಾನ ತೆಗೆದುಕೊಳ್ಳಬಾರದೆಂಬುದೇ ಇಲ್ಲಿನ ತಾತ್ಪರ್ಯವಾಗಿದೆ. ಇದರ ಮೂಲ ತಿಳಿದುಕೊಂಡು ಅದನ್ನು ಸರಿಪಡಿಸುವ ಕೆಲಸ ಮಾಡುವ ಮೂಲಕ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೇವಲ ಯಾವುದೋ ಒಮ್ಮೆ ಸಿನಿಮಾಗೋಸ್ಕರ ಅಥವಾ ಇನ್ನಾವುದೋ ಕಾರಣಕ್ಕೆ ಹೆಣ್ಣು ಮಕ್ಕಳು ತುಂಡು ಬಟ್ಟೆ ಹಾಕಿಕೊಂಡು ಬಂದರೆ ಮಾತ್ರ ಅವಳು ಫೋಕೋಸ್ ಆಗಿ ಬಿಡುತ್ತಾಳೆ. ನಯ, ನಾಜೂಕಾಗಿ ಸೀರೆ ಹುಟ್ಟಿಕೊಂಡು ಬಂದರೆ ಅವಳು ಮಾತ್ರ ಫೋಕೋಸ್ ಆಗುವುದೇ ಇಲ್ಲ ಏಕೆ? ಇದನ್ನು ಮಾಧ್ಯಮ ಬಳಗವೂ ಅರ್ಥ ಮಾಡಿಕೊಂಡು ಸಮಾಜಕ್ಕೆ ಏನು ಬೇಕೆಂಬುದನ್ನು ಚಿತ್ರಿಸಿ ನೀಡುವ ಜವಾಬ್ದಾರಿ ಇದೆ. ಹೆಣ್ಣು ಮಕ್ಕಳನ್ನು ಆರ್ಥಿಕವಾಗಿ ಸದೃಢವಾಗಿ ಮಾಡುವ ಹೊಣೆಗಾರಿಕೆ ಹೊರುವ ಮನಸುಗಳು ಸಮಾಜದಲ್ಲಿ ಬೇಕು ಎಂದು ತಿಳಿಸಿದರು.

ಹೆಣ್ಣಿನ ಮೇಲೆ ದೌರ್ಜನ್ಯ ನಡೆದರೆ ಅದನ್ನು ಆ ಹೆಣ್ಣು ಪ್ರಶ್ನಿಸಲು ಹೋಗದೇ ಇದ್ದರೆ ಮಾತ್ರ ಸಮಾಜದಲ್ಲಿ ದೊಡ್ಡ ಮಟ್ಟಕ್ಕೆ ಬೆಳೆಯುತ್ತಾಳೆ, ಮಾತಾಡಿದರೆ ಇಲ್ಲಿ ಶಿಕ್ಷೆ ಆಗಿ ಬಿಡುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಆಲೆಮನೆಗಳು ಹೆಚ್ಚಿವೆ, ಆದರೆ ಅಂತಹ ಯಾವುದೋ ಒಂದು ಆಲೆಮನೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತದೆ, ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಎಲ್ಲಿಯಾದರೂ ಗಂಡು ಭ್ರೂಣ ಹತ್ಯೆ ನಡೆದಿದಿಯಾ ಎಂಬುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕು ಎಂದು ವಿಷಾದಿಸಿದರು.

ಸಾಹಿತಿ ಎಂ.ಎಸ್.ಆಶಾದೇವಿ ಮಾತನಾಡಿ, ಅತ್ಯಾಚಾರಕ್ಕೆ ಒಳಗಾದ ಹೆಣ್ಣು ಮಕ್ಕಳನ್ನು ಏಕೆ ಸಂತ್ರಸ್ಥೆ ಎನ್ನಬೇಕು, ಅತ್ಯಾಚಾರ ಮಾಡಿದವರನ್ನೇ ಸಾಮಾಜಿಕವಾಗಿ ಬಹಿಷ್ಕಾರ ಮಾಡಬೇಕು. ಸಂತ್ರೆಸ್ಥೆ ಎನ್ನುವ ಬದಲು ಅವಳ ಚೈತನ್ಯದ ಮೇಲೆ ಅತ್ಯಾಚಾರ ನಡೆದಿಲ್ಲ ಎನ್ನುವುದನ್ನು ನಾವು ಮತ್ತು ನೀವು ಅರ್ಥ ಮಾಡಿಕೊಳ್ಳಬೇಕು. ಸಮಾಜದಲ್ಲಿ ಅತ್ಯಾಚಾರ ಹಾಗೂ ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯ, ದಬ್ಬಾಳಿಕೆ ಕೊನೆಗಾಣಬೇಕು. ಅಂತಹ ನಿರ್ಧಾರಗಳನ್ನು ಸಮಾಜದಲ್ಲಿ ತೆಗೆದುಕೊಳ್ಳುವುದು ಮುಖ್ಯವಾಗಿದೆ ಎಂದು ತಿಳಿಸಿದರು.

ಅಖಿಲ ಭಾರತ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಸಂಚಾಲಕರಾದ ಎ.ಆರ್.ಸಿಂಧು, ಸಿ.ಕುಮಾರಿ ಮಾತನಾಡಿದರು. ಸಿಐಟಿಯು ರಾಜ್ಯ ಸಮಿತಿ ಅಧ್ಯಕ್ಷೆ ಎಸ್.ವರಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಯಮುನಾ ಗಾಂವ್ಕರ್ ಅವರು ವಿಷಯ ಮಂಡಿಸಿದರು.

ಕಾರ್ಯಕ್ರಮದಲ್ಲಿ ಲೋಕೋ ಪೈಲಟ್ ಅಭಿರಾಮಿ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ಸಂಚಾಲಕಿ ಎಚ್.ಎಸ್.ಸುನಂದಾ, ಅಂಗನವಾಡಿ ನೌಕರರ ಸಂಘದ ಪ್ರಮೀಳಾ ಕುಮಾರಿ, ಮುಖಂಡರಾದ ಮಂಗಳಾ ಕುಮಾರಿ, ಕುಸುಮಾ, ಜಿ.ರಾಮಕೃಷ್ಣ, ಬಾಲ್ಕೇಜಿರಾವ್ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago