ಮಂಡ್ಯ: ಮಹಿಳೆಯರು ತಮ್ಮ ವಿರುದ್ಧ ಅನ್ಯಾಯ ನಡೆದ ಸಂದರ್ಭದಲ್ಲಿ ಯಾವ ಭಯವು ಇಲ್ಲದೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸುವ ಧೈರ್ಯ ಬೆಳಸಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿದರು.
ಕೆ.ಆರ್.ಪೇಟೆ ತಾಲ್ಲೂಕು ಗುರುಭವನದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಕರ್ನಾಟಕ ಪೊಲೀಸ್ ಜನ ಸ್ನೇಹಿ ಕರ್ನಾಟಕ ಪೊಲೀಸ್ ಜನ ಸ್ನೇಹಿ ಎಂದೇ ಹೆಸರುವಾಸಿಯಾಗಿದ್ದು, ಮಹಿಳೆಯರು ತಮ್ಮ ಬಳಿ ಸದಾ ಸ್ಥಳೀಯ ಪೊಲೀಸ್ ಠಾಣೆ ಅಥವಾ ಪೊಲೀಸ್ ಅಧಿಕಾರಿಗಳ ಸಂಖ್ಯೆಯನ್ನು ಇಟ್ಟುಕೊಳ್ಳಬೇಕು. ಅನ್ಯಾಯ ಅಥವಾ ದೌರ್ಜನ್ಯ ನಡೆದ ಸಂದರ್ಭದಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ. ಇಲ್ಲೂ ಸರಿಯಾದ ಸ್ಪಂದನೆ ಸಿಗದಿದ್ದರೆ ನಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ಎಂದು ಕಿವಿ ಮಾತು ಹೇಳಿದರು.
ಮಹಿಳೆಯರು ಸ್ವಾವಲಂಬಿಗಳಾಗಿ ಮನೆಯಿಂದ ಹೊರ ಹೋಗುವ ಮುನ್ನ ಅವರ ಪಸ್೯ ನಲ್ಲಿ ಹಣ ವಿರಬೇಕು. ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಅತ್ಯವಶ್ಯಕ ವಾಗಿದ್ದು, ಮಹಿಳೆಯರು ಸ್ವಾವಲಂಬಿಗಳಾಗಲು ಹಲವಾರು ತರಬೇತಿ ಹಾಗೂ ಯೋಜನೆಗಳನ್ನು ರೂಪಿಸಿದೆ ಸದುಪಯೋಗ ಪಡಿಸಿಕೊಳ್ಳಿ ಎಂದರು.
ಬಾಲ್ಯವಿವಾಹದಂತಹ ಅನಿಷ್ಠವನ್ನು ತೊಡೆದು ಹಾಕಲು ಮಹಿಳೆಯರಿಂದಲೇ ಸಾಧ್ಯ. ತಾಯಿ ತನ್ನ ಮಗಳಿಗೆ ವಿದ್ಯಾಭ್ಯಾಸ ನೀಡುತ್ತೇನೆ, ಬಾಲ್ಯ ವಿವಾಹ ಮಾಡುವುದಿಲ್ಲ ಎಂದು ಪಣ ತೊಡಬೇಕು ಎಂದು ಕರೆ ನೀಡಿದರು.
ಹೆಣ್ಣು ಮಕ್ಕಳು ಜೀವನದಲ್ಲಿ ಸಾಧನೆ ಮಾಡಲು ಕನಸು ಕಾಣಬೇಕು ಹಾಗೂ ಗುರಿ ನಿಗದಿ ಮಾಡಿಕೊಳ್ಳಬೇಕು. ಗುರಿ ಸಾಧನೆಗೆ ಜೀವನದಲ್ಲಿ ಹಲವಾರು ತೊಡಕುಗಳು ಬರುತ್ತವೆ ಅವುಗಳನ್ನು ಮೆಟ್ಟಿ ನಿಲ್ಲಬೇಕು. ನಿರಂತರ ಪರಿಶ್ರಮ ಹಾಗೂ ಶ್ರದ್ಧೆಯಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…