ಮಂಡ್ಯ: ಮಹಿಳೆಯರು ತಮ್ಮ ವಿರುದ್ಧ ಅನ್ಯಾಯ ನಡೆದ ಸಂದರ್ಭದಲ್ಲಿ ಯಾವ ಭಯವು ಇಲ್ಲದೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸುವ ಧೈರ್ಯ ಬೆಳಸಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿದರು.
ಕೆ.ಆರ್.ಪೇಟೆ ತಾಲ್ಲೂಕು ಗುರುಭವನದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಕರ್ನಾಟಕ ಪೊಲೀಸ್ ಜನ ಸ್ನೇಹಿ ಕರ್ನಾಟಕ ಪೊಲೀಸ್ ಜನ ಸ್ನೇಹಿ ಎಂದೇ ಹೆಸರುವಾಸಿಯಾಗಿದ್ದು, ಮಹಿಳೆಯರು ತಮ್ಮ ಬಳಿ ಸದಾ ಸ್ಥಳೀಯ ಪೊಲೀಸ್ ಠಾಣೆ ಅಥವಾ ಪೊಲೀಸ್ ಅಧಿಕಾರಿಗಳ ಸಂಖ್ಯೆಯನ್ನು ಇಟ್ಟುಕೊಳ್ಳಬೇಕು. ಅನ್ಯಾಯ ಅಥವಾ ದೌರ್ಜನ್ಯ ನಡೆದ ಸಂದರ್ಭದಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ. ಇಲ್ಲೂ ಸರಿಯಾದ ಸ್ಪಂದನೆ ಸಿಗದಿದ್ದರೆ ನಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ಎಂದು ಕಿವಿ ಮಾತು ಹೇಳಿದರು.
ಮಹಿಳೆಯರು ಸ್ವಾವಲಂಬಿಗಳಾಗಿ ಮನೆಯಿಂದ ಹೊರ ಹೋಗುವ ಮುನ್ನ ಅವರ ಪಸ್೯ ನಲ್ಲಿ ಹಣ ವಿರಬೇಕು. ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಅತ್ಯವಶ್ಯಕ ವಾಗಿದ್ದು, ಮಹಿಳೆಯರು ಸ್ವಾವಲಂಬಿಗಳಾಗಲು ಹಲವಾರು ತರಬೇತಿ ಹಾಗೂ ಯೋಜನೆಗಳನ್ನು ರೂಪಿಸಿದೆ ಸದುಪಯೋಗ ಪಡಿಸಿಕೊಳ್ಳಿ ಎಂದರು.
ಬಾಲ್ಯವಿವಾಹದಂತಹ ಅನಿಷ್ಠವನ್ನು ತೊಡೆದು ಹಾಕಲು ಮಹಿಳೆಯರಿಂದಲೇ ಸಾಧ್ಯ. ತಾಯಿ ತನ್ನ ಮಗಳಿಗೆ ವಿದ್ಯಾಭ್ಯಾಸ ನೀಡುತ್ತೇನೆ, ಬಾಲ್ಯ ವಿವಾಹ ಮಾಡುವುದಿಲ್ಲ ಎಂದು ಪಣ ತೊಡಬೇಕು ಎಂದು ಕರೆ ನೀಡಿದರು.
ಹೆಣ್ಣು ಮಕ್ಕಳು ಜೀವನದಲ್ಲಿ ಸಾಧನೆ ಮಾಡಲು ಕನಸು ಕಾಣಬೇಕು ಹಾಗೂ ಗುರಿ ನಿಗದಿ ಮಾಡಿಕೊಳ್ಳಬೇಕು. ಗುರಿ ಸಾಧನೆಗೆ ಜೀವನದಲ್ಲಿ ಹಲವಾರು ತೊಡಕುಗಳು ಬರುತ್ತವೆ ಅವುಗಳನ್ನು ಮೆಟ್ಟಿ ನಿಲ್ಲಬೇಕು. ನಿರಂತರ ಪರಿಶ್ರಮ ಹಾಗೂ ಶ್ರದ್ಧೆಯಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…