ಮಂಡ್ಯ

ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್‌ನಿಂದ ಕಿರುಕುಳ ಆರೋಪ; ಮಹಿಳೆಯರ ಪ್ರತಿಭಟನೆ

ಮಂಡ್ಯ: ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್‌ನವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ತಾಲ್ಲೂಕಿನ ಹೊಳಲು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಹಗ್ಗ ಮತ್ತು ಸೀರೆಗಳನ್ನು ಪಂಚಾಯಿತಿ ಎದುರಿನ ಶೆಲ್ಟರ್‌ನಲ್ಲಿ ನೇತು ಹಾಕಿ, ‘ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ’. ‘ಯಾವ ಅಧಿಕಾರಿಗೆ ಮನವಿ ಕೊಡಬೇಕೆಂದು ಗೊತ್ತಿಲ್ಲದೆ, ಪಂಚಾಯಿತಿಗೆ ಬಂದಿದ್ದೇವೆ’ ಎಂದು ಲತಾ, ದಿವ್ಯಾ, ರೇಣುಕಾ, ಸೌಮ್ಯಾ, ರುಕ್ಮಿಣಿ ಅಳಲು ತೋಡಿಕೊಂಡರು.

‘ಮೈಕ್ರೋ ಫೈನಾನ್ಸ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಖಾಸಗಿ ಬ್ಯಾಂಕ್‌ನವರು ಕೂಲಿ ಮಾಡುತ್ತಿರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಲಕ್ಷಗಟ್ಟಲೆ ಸಾಲ ನೀಡಿದ್ದು, ಮರುಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ. ಸಾಲ ಪಡೆದಿರುವುದು ನಿಜ. ಆದರೆ, ಮರುಪಾವತಿ ಮಾಡಲು ಕಾಲಾವಕಾಶ ನೀಡಬೇಕು’ ಎಂದು ಕನ್ನಡಸೇನೆ ಸಂಘಟನೆಯ ಜಿಲ್ಲಾ ಸಂಚಾಲಕ ವೇಣುಗೋಪಾಲ್ ಒತ್ತಾಯಿಸಿದರು.

ಕಂತಿನ ಪ್ರಕಾರ ಸಾಲ ಮರುಪಾವತಿ ಮಾಡಲು ತಪ್ಪಿದರೆ, ಒಂದು ವಾರ, ೧೫ ದಿವಸ ಅಥವಾ ಒಂದು ತಿಂಗಳ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲು ಮಾಡಲು ನಿಲ್ಲುತ್ತಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಭಯ ಹುಟ್ಟಿಸುತ್ತಾರೆ, ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಂಚಾಯಿತಿ ಉಪಾಧ್ಯಕ್ಷ ನಾರಾಯಣಪ್ಪ, ಸದಸ್ಯರಾದ ರಾಜಶೇಖರ್, ಎಚ್.ಡಿ.ಪಲ್ಲವಿ ಹಾಗೂ ಪಿಡಿಒ ಸಂತೋಷ್, ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಮಹಿಳೆಯರು ಪ್ರತಿಭಟನೆ ಹಿಂಪಡೆದರು.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

32 mins ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

1 hour ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

1 hour ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

2 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

2 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

2 hours ago