ಮಂಡ್ಯ

ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್‌ನಿಂದ ಕಿರುಕುಳ ಆರೋಪ; ಮಹಿಳೆಯರ ಪ್ರತಿಭಟನೆ

ಮಂಡ್ಯ: ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್‌ನವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ತಾಲ್ಲೂಕಿನ ಹೊಳಲು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಹಗ್ಗ ಮತ್ತು ಸೀರೆಗಳನ್ನು ಪಂಚಾಯಿತಿ ಎದುರಿನ ಶೆಲ್ಟರ್‌ನಲ್ಲಿ ನೇತು ಹಾಕಿ, ‘ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ’. ‘ಯಾವ ಅಧಿಕಾರಿಗೆ ಮನವಿ ಕೊಡಬೇಕೆಂದು ಗೊತ್ತಿಲ್ಲದೆ, ಪಂಚಾಯಿತಿಗೆ ಬಂದಿದ್ದೇವೆ’ ಎಂದು ಲತಾ, ದಿವ್ಯಾ, ರೇಣುಕಾ, ಸೌಮ್ಯಾ, ರುಕ್ಮಿಣಿ ಅಳಲು ತೋಡಿಕೊಂಡರು.

‘ಮೈಕ್ರೋ ಫೈನಾನ್ಸ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಖಾಸಗಿ ಬ್ಯಾಂಕ್‌ನವರು ಕೂಲಿ ಮಾಡುತ್ತಿರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಲಕ್ಷಗಟ್ಟಲೆ ಸಾಲ ನೀಡಿದ್ದು, ಮರುಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ. ಸಾಲ ಪಡೆದಿರುವುದು ನಿಜ. ಆದರೆ, ಮರುಪಾವತಿ ಮಾಡಲು ಕಾಲಾವಕಾಶ ನೀಡಬೇಕು’ ಎಂದು ಕನ್ನಡಸೇನೆ ಸಂಘಟನೆಯ ಜಿಲ್ಲಾ ಸಂಚಾಲಕ ವೇಣುಗೋಪಾಲ್ ಒತ್ತಾಯಿಸಿದರು.

ಕಂತಿನ ಪ್ರಕಾರ ಸಾಲ ಮರುಪಾವತಿ ಮಾಡಲು ತಪ್ಪಿದರೆ, ಒಂದು ವಾರ, ೧೫ ದಿವಸ ಅಥವಾ ಒಂದು ತಿಂಗಳ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲು ಮಾಡಲು ನಿಲ್ಲುತ್ತಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಭಯ ಹುಟ್ಟಿಸುತ್ತಾರೆ, ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಂಚಾಯಿತಿ ಉಪಾಧ್ಯಕ್ಷ ನಾರಾಯಣಪ್ಪ, ಸದಸ್ಯರಾದ ರಾಜಶೇಖರ್, ಎಚ್.ಡಿ.ಪಲ್ಲವಿ ಹಾಗೂ ಪಿಡಿಒ ಸಂತೋಷ್, ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಮಹಿಳೆಯರು ಪ್ರತಿಭಟನೆ ಹಿಂಪಡೆದರು.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

48 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

1 hour ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…

2 hours ago