ಮಂಡ್ಯ

ಪುರುಷರ ಆಲೋಚನೆ ಬದಲಾದರೆ ಮಹಿಳೆ ಸದೃಢಲಾಗುತ್ತಾಳೆ: ಡಾ.ಹೆಚ್‌.ಸಿ ಹೇಮಲತಾ

ಶ್ರೀರಂಗಪಟ್ಟಣ: ಸಮಾಜದಲ್ಲಿ ಮಹಿಳೆಯರು ನಾಲ್ಕು ಗೋಡೆಯಲ್ಲಿ ಬದುಕಬೇಕು ಎಂಬ ಪುರುಷರ ಆಲೋಚನೆ ಬದಲಾದರೆ ಮಹಿಳೆಯರು ಇನ್ನೂ ಹೆಚ್ಚು ಸದೃಢರಾಗುತ್ತಾರೆ ಎಂದು ಮಹಿಳಾ ಸರ್ಕಾರಿ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥೆ ಹೇಮಲತಾ‌.ಎಚ್.ಸಿ ರವರು ಅಭಿಪ್ರಾಯಪಟ್ಟರು.

ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಏರ್ಪಡಿಸಿದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ದೇಶ ಪ್ರಗತಿ ಆಗಬೇಕಾದರೆ ಪುರುಷ ಮತ್ತು ಮಹಿಳೆ ಇಬ್ಬರ ಕಾಣಿಕೆ ಬಹಳ ಮುಖ್ಯ. ಆದರೆ, ಭಾರತವು ಪುರುಷ ಪ್ರಧಾನವಾದ ದೇಶವಾಗಿದ್ದು ಇನ್ನೂ ಕೆಲವು ಕಡೆ ಮಹಿಳೆ ಅಬಲೆಯಾಗಿದ್ದಾಳೆ ಎಂದು ಆತಂಕ ವ್ಯಕ್ತಪಡಿಸಿದರು.

ಒಂದು ದೇಶದ ಆರ್ಥಿಕ ಪ್ರಗತಿಯ ಸಾಧನೆಯಾಗಿ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾಳೆ. ಇಂದಿರಾಗಾಂಧಿ, ಕಲ್ಪನಾ ಚಾವ್ಲಾ, ಕಿರಣ್ ಮುಜುಂದಾರ್, ಸಾಲುಮರದ ತಿಮ್ಮಕ್ಕ ಇನ್ನೂ ಹಲವಾರು ಮಹಿಳೆಯರು ಬಾಹ್ಯಾಕಾಶದಿಂದ ಹಿಡಿದು ಆಟೋ ಚಾಲನೆ ಮಾಡುವವರೆಗೂ ತಮ್ಮ ನೈಪುಣ್ಯತೆ, ಧೈರ್ಯ, ಸವಾಲುಗಳ ಮೂಲಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಕುಟುಂಬದಲ್ಲಿ ತಾಯಿಯಾಗಿ, ಹೆಂಡತಿಯಾಗಿ, ಸಹೋದರರಿಯಾಗಿ, ಮಗಳಾಗಿ, ಎಲ್ಲ ಮುಜಲುಗಳಲ್ಲಿ ಅವಳ ಕಾಣಿಕೆ ದೊಡ್ಡದು ಎಂದು ತಿಳಿಸಿದರು.

ಸಮಾಜದಲ್ಲಿ ಮಹಿಳೆಗೆ ಸಮಾನ ಅವಕಾಶ, ಸಮಾನತೆ, ಗೌರವ ದೊರೆತರೆ ಆ ದೇಶ ಸಮೃದ್ಧಿಯ ನಾಡಾಗುತ್ತದೆ ಇಲ್ಲವಾದರೆ ಅಸಮಾನತೆಯ ಗೂಡಾಗುತ್ತದೆ ಎಂದು ಹೇಳಿದರು.

ನಂತರ ಕಾಲೇಜಿನ ಪ್ರಾಂಶುಪಾಲರಾದ ಡಾ.ಗುರುರಾಜ ಪ್ರಭು.ಕೆ ಮಾತನಾಡಿ, ಸಮಾಜ ಕಟ್ಟುವಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯವಾದದ್ದು. ಆದರೆ, ಅವರಿಗೆ ಒಳ್ಳೆಯ ಅವಕಾಶ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಸಂವಿಧಾನದ ಹಕ್ಕು ಮತ್ತು ಅವಕಾಶ ಬಳಸಿಕೊಳ್ಳುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಕುಸುಮದೇವಿ, ಸಸ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸೈಯದ್ ಕೌಸರ್, ಪ್ರಾಧ್ಯಾಪಕರಾದ ಡಾ. ಜಯಲಕ್ಷ್ಮಿ, ಡಾ.ಪುಷ್ಪಲತಾ, ಪ್ರಾಣಿ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಗಿರಿಜಾಂಬರವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago