ಮಂಡ್ಯ

ಪುರುಷರ ಆಲೋಚನೆ ಬದಲಾದರೆ ಮಹಿಳೆ ಸದೃಢಲಾಗುತ್ತಾಳೆ: ಡಾ.ಹೆಚ್‌.ಸಿ ಹೇಮಲತಾ

ಶ್ರೀರಂಗಪಟ್ಟಣ: ಸಮಾಜದಲ್ಲಿ ಮಹಿಳೆಯರು ನಾಲ್ಕು ಗೋಡೆಯಲ್ಲಿ ಬದುಕಬೇಕು ಎಂಬ ಪುರುಷರ ಆಲೋಚನೆ ಬದಲಾದರೆ ಮಹಿಳೆಯರು ಇನ್ನೂ ಹೆಚ್ಚು ಸದೃಢರಾಗುತ್ತಾರೆ ಎಂದು ಮಹಿಳಾ ಸರ್ಕಾರಿ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥೆ ಹೇಮಲತಾ‌.ಎಚ್.ಸಿ ರವರು ಅಭಿಪ್ರಾಯಪಟ್ಟರು.

ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಏರ್ಪಡಿಸಿದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ದೇಶ ಪ್ರಗತಿ ಆಗಬೇಕಾದರೆ ಪುರುಷ ಮತ್ತು ಮಹಿಳೆ ಇಬ್ಬರ ಕಾಣಿಕೆ ಬಹಳ ಮುಖ್ಯ. ಆದರೆ, ಭಾರತವು ಪುರುಷ ಪ್ರಧಾನವಾದ ದೇಶವಾಗಿದ್ದು ಇನ್ನೂ ಕೆಲವು ಕಡೆ ಮಹಿಳೆ ಅಬಲೆಯಾಗಿದ್ದಾಳೆ ಎಂದು ಆತಂಕ ವ್ಯಕ್ತಪಡಿಸಿದರು.

ಒಂದು ದೇಶದ ಆರ್ಥಿಕ ಪ್ರಗತಿಯ ಸಾಧನೆಯಾಗಿ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾಳೆ. ಇಂದಿರಾಗಾಂಧಿ, ಕಲ್ಪನಾ ಚಾವ್ಲಾ, ಕಿರಣ್ ಮುಜುಂದಾರ್, ಸಾಲುಮರದ ತಿಮ್ಮಕ್ಕ ಇನ್ನೂ ಹಲವಾರು ಮಹಿಳೆಯರು ಬಾಹ್ಯಾಕಾಶದಿಂದ ಹಿಡಿದು ಆಟೋ ಚಾಲನೆ ಮಾಡುವವರೆಗೂ ತಮ್ಮ ನೈಪುಣ್ಯತೆ, ಧೈರ್ಯ, ಸವಾಲುಗಳ ಮೂಲಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಕುಟುಂಬದಲ್ಲಿ ತಾಯಿಯಾಗಿ, ಹೆಂಡತಿಯಾಗಿ, ಸಹೋದರರಿಯಾಗಿ, ಮಗಳಾಗಿ, ಎಲ್ಲ ಮುಜಲುಗಳಲ್ಲಿ ಅವಳ ಕಾಣಿಕೆ ದೊಡ್ಡದು ಎಂದು ತಿಳಿಸಿದರು.

ಸಮಾಜದಲ್ಲಿ ಮಹಿಳೆಗೆ ಸಮಾನ ಅವಕಾಶ, ಸಮಾನತೆ, ಗೌರವ ದೊರೆತರೆ ಆ ದೇಶ ಸಮೃದ್ಧಿಯ ನಾಡಾಗುತ್ತದೆ ಇಲ್ಲವಾದರೆ ಅಸಮಾನತೆಯ ಗೂಡಾಗುತ್ತದೆ ಎಂದು ಹೇಳಿದರು.

ನಂತರ ಕಾಲೇಜಿನ ಪ್ರಾಂಶುಪಾಲರಾದ ಡಾ.ಗುರುರಾಜ ಪ್ರಭು.ಕೆ ಮಾತನಾಡಿ, ಸಮಾಜ ಕಟ್ಟುವಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯವಾದದ್ದು. ಆದರೆ, ಅವರಿಗೆ ಒಳ್ಳೆಯ ಅವಕಾಶ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಸಂವಿಧಾನದ ಹಕ್ಕು ಮತ್ತು ಅವಕಾಶ ಬಳಸಿಕೊಳ್ಳುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಕುಸುಮದೇವಿ, ಸಸ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸೈಯದ್ ಕೌಸರ್, ಪ್ರಾಧ್ಯಾಪಕರಾದ ಡಾ. ಜಯಲಕ್ಷ್ಮಿ, ಡಾ.ಪುಷ್ಪಲತಾ, ಪ್ರಾಣಿ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಗಿರಿಜಾಂಬರವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

10 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

11 hours ago