ಮಂಡ್ಯ

ಕಾಗದದ ಹಾಳೆಯಲ್ಲಿ ಭಗವದ್ಗೀತೆಯ 18 ಅಧ್ಯಾಯ ಬರೆದ ಮಂಡ್ಯದ ಅರ್ಚಕ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ.

ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್‌, ಚಾರ್ಟ್‌ ಪೇಪರ್‌ ಬಳಸಿ ಅವುಗಳಲ್ಲಿ ಚಿತ್ರ ಬರೆಯುವ ಈ ಅರ್ಚಕ, ಅದರ ಜೊತೆ ಜೊತೆಗೆ ವ್ಯಕ್ತಿ ಆಗಿದ್ದರೆ ಅಂತಹ ಮಹಾನ್‌ ನಾಯಕರ ಜೀವನ ಚರಿತ್ರೆಯನ್ನೂ ಸಹ ಬರೆಯುತ್ತಾರೆ.

ಅಂದಹಾಗೆ ಇವರ ಹೆಸರು ಪಟ್ಟಸೋಮನಹಳ್ಳಿಯ ಶ್ರೀ ಶಿವಶೈಲಾ ದೇವಾಲಯದ ಅರ್ಚಕ ವಿಜಯ್‌ ಕುಮಾರ್‌. ಅತೀ ಸೂಕ್ಷ್ಮ ಬರವಣಿಗೆಯ ಇವರ ಕೌಶಲ್ಯವಂತೂ ಭಾರೀ ಅದ್ಬುತವೆನಿಸಿದೆ.

ಎ4 ಶೀಟ್‌ವೊಂದರಲ್ಲಿ ವಿಜಯ್‌ ಕುಮಾರ್‌ ಅವರು ಸಾವಿರಕ್ಕೂ ಹೆಚ್ಚು ಬಾರಿ ಜೈ ಶ್ರೀರಾಮ್‌ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಭಗವದ್ಗೀತೆಯ 18 ಅಧ್ಯಾಯಗಳನ್ನು ಒಂದೇ ಹಾಳೆಯಲ್ಲಿ ಬರೆದು ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲ. ಡಾ.ರಾಜ್‌ ಕುಮಾರ್‌, ನಟ ವಿಷ್ಣುವರ್ಧನ್‌, ಕೆ.ಎಸ್.ನಿಸಾರ್‌ ಅಹಮ್ಮದ್‌ ಸೇರಿದಂತೆ ಅನೇಕರ ಬಗ್ಗೆ ಚಿತ್ರ ಸಹಿತ ಅವರ ಆತ್ಮಚರಿತ್ರೆಯನ್ನು ಒಂದೇ ಕಾಗದದಲ್ಲಿ ಬರೆಯಬಲ್ಲವರಾಗಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

3 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

4 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

4 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

4 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

4 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

4 hours ago