ಮಂಡ್ಯ

ಕಾಗದದ ಹಾಳೆಯಲ್ಲಿ ಭಗವದ್ಗೀತೆಯ 18 ಅಧ್ಯಾಯ ಬರೆದ ಮಂಡ್ಯದ ಅರ್ಚಕ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ದೇವಾಲಯವೊಂದರ ಅರ್ಚಕರೋರ್ವರು ಕಾಗದದ ಹಾಳೆಯಲ್ಲಿ ವಿಶಿಷ್ಟ ಚಿತ್ತಾರ ಬಿಡಿಸಿದ್ದಾರೆ.

ಕಾಗದದ ಹಾಳೆಯೊಂದರಲ್ಲಿ ಚಿತ್ರ ಸಹಿತ ಮಾಹಿತಿಯನ್ನು ಬರೆಯುವ ಮೂಲಕ ದೇವಾಲಯದ ಅರ್ಚಕರು ವಿಶಿಷ್ಟ ಸಾಧನೆ ಮೆರೆಯುತ್ತಾ ಬಂದಿದ್ದಾರೆ. ಎ4 ಶೀಟ್‌, ಚಾರ್ಟ್‌ ಪೇಪರ್‌ ಬಳಸಿ ಅವುಗಳಲ್ಲಿ ಚಿತ್ರ ಬರೆಯುವ ಈ ಅರ್ಚಕ, ಅದರ ಜೊತೆ ಜೊತೆಗೆ ವ್ಯಕ್ತಿ ಆಗಿದ್ದರೆ ಅಂತಹ ಮಹಾನ್‌ ನಾಯಕರ ಜೀವನ ಚರಿತ್ರೆಯನ್ನೂ ಸಹ ಬರೆಯುತ್ತಾರೆ.

ಅಂದಹಾಗೆ ಇವರ ಹೆಸರು ಪಟ್ಟಸೋಮನಹಳ್ಳಿಯ ಶ್ರೀ ಶಿವಶೈಲಾ ದೇವಾಲಯದ ಅರ್ಚಕ ವಿಜಯ್‌ ಕುಮಾರ್‌. ಅತೀ ಸೂಕ್ಷ್ಮ ಬರವಣಿಗೆಯ ಇವರ ಕೌಶಲ್ಯವಂತೂ ಭಾರೀ ಅದ್ಬುತವೆನಿಸಿದೆ.

ಎ4 ಶೀಟ್‌ವೊಂದರಲ್ಲಿ ವಿಜಯ್‌ ಕುಮಾರ್‌ ಅವರು ಸಾವಿರಕ್ಕೂ ಹೆಚ್ಚು ಬಾರಿ ಜೈ ಶ್ರೀರಾಮ್‌ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಭಗವದ್ಗೀತೆಯ 18 ಅಧ್ಯಾಯಗಳನ್ನು ಒಂದೇ ಹಾಳೆಯಲ್ಲಿ ಬರೆದು ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲ. ಡಾ.ರಾಜ್‌ ಕುಮಾರ್‌, ನಟ ವಿಷ್ಣುವರ್ಧನ್‌, ಕೆ.ಎಸ್.ನಿಸಾರ್‌ ಅಹಮ್ಮದ್‌ ಸೇರಿದಂತೆ ಅನೇಕರ ಬಗ್ಗೆ ಚಿತ್ರ ಸಹಿತ ಅವರ ಆತ್ಮಚರಿತ್ರೆಯನ್ನು ಒಂದೇ ಕಾಗದದಲ್ಲಿ ಬರೆಯಬಲ್ಲವರಾಗಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

3 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

19 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

21 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

21 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 day ago