ಮಂಡ್ಯ

ಕಾವೇರಿ ಆರತಿ, ಅಮ್ಯೂಸ್‌ಮೆಂಟ್‌ ಪಾರ್ಕ್‌ಗೆ ಯದುವೀರ್‌ ವಿರೋಧ

ಮಂಡ್ಯ: ಕೆ.ಆರ್.ಎಸ್.ನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರೈತರು ಪ್ರಬಲವಾಗಿ ವಿರೋಧಿಸುತ್ತಿರುವುದು ಸಮಂಜಸವಾಗಿದೆ. ರೈತರ ಹೋರಾಟಕ್ಕೆ ನನ್ನ ಬೆಂಬಲವೂ ಇದೆ ಎಂದು ಯದುವೀರ್ ಶ್ರೀಕೃಷ್ಣದತ್ತ ಒಡೆಯರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್. ಅಣೆಕಟ್ಟೆಗೆ ೧೦೦ ವರ್ಷ ಸಂಭವಿಸುತ್ತಿದೆ. ಅಣೆಕಟ್ಟೆಯ ಭದ್ರತೆ ದೃಷ್ಟಿಯಿಂದ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ ಒಳ್ಳೆಯದಲ್ಲ. ಇದರಿಂದ ಕೆ.ಆರ್.ಎಸ್. ಸುತ್ತಮುತ್ತಲಿನ ಪರಿಸರಕ್ಕೂ ಧಕ್ಕೆಯಾಗಲಿದೆ. ಈ ಯೋಜನೆಗಳಿಂದೇನೂ ಕೆ.ಆರ್.ಎಸ್. ಪ್ರಸಿದ್ಧಿಯಾಗಬೇಕಿಲ್ಲ. ಈಗಾಗಲೇ ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ದಿನನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ ಎಂದರು.

ಸರ್ಕಾರ ರೈತರ ಹೋರಾಟದ ಧ್ವನಿಯನ್ನು ಪರಿಗಣಿಸಿ, ಕೆ.ಆರ್.ಎಸ್. ಹೊರತುಪಡಿಸಿ ಮಳವಳ್ಳಿ ತಾಲ್ಲೂಕಿನ ಶಿಂಷಾ ಬ್ಲಫ್ ಅಥವಾ ಬೇರೆ ಸ್ಥಳಗಳಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ ಮಾಡಲಿ. ಕೆ.ಆರ್.ಎಸ್.ನಲ್ಲಿ ಯಾವುದೇ ಕಾರಣಕ್ಕೂ ನಿರ್ಮಾಣ ಮಾಡಬಾರದು ಎಂದು ಹೇಳಿದರು.

ಕಾವೇರಿ ಆರತಿಯನ್ನು ನಾವೇ ಮಾಡುತ್ತೇವೆ:
ಸಂಸ್ಕೃತಿಯಿಂದ ಬಂದಿರುವುದು ನಮ್ಮ ಮಂಡ್ಯ. ಹೊಸ ಪದ್ಧತಿ ಬೇಡ, ಕಾವೇರಿ ಆರತಿಗೆ ೯೨ ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಇದಕ್ಕೆ ಇಷ್ಟು ವೆಚ್ಚ ಬೇಕಾ ಎಂಬುದೇ ನನಗೂ ಆಶ್ಚರ್ಯವಾಗಿದೆ. ಬಿಜೆಪಿಯವರೇ ಕಡಿಮೆ ವೆಚ್ಚದಲ್ಲಿ ಕಾವೇರಿ ಆರತಿ ಮಾಡಿಕೊಡುತ್ತೇವೆ. ಹೊಸ ಪದ್ಧತಿ ಬೇಡ ಎಂದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago