yadhuveer wadiyar
ಮಂಡ್ಯ: ಕೆ.ಆರ್.ಎಸ್.ನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರೈತರು ಪ್ರಬಲವಾಗಿ ವಿರೋಧಿಸುತ್ತಿರುವುದು ಸಮಂಜಸವಾಗಿದೆ. ರೈತರ ಹೋರಾಟಕ್ಕೆ ನನ್ನ ಬೆಂಬಲವೂ ಇದೆ ಎಂದು ಯದುವೀರ್ ಶ್ರೀಕೃಷ್ಣದತ್ತ ಒಡೆಯರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್. ಅಣೆಕಟ್ಟೆಗೆ ೧೦೦ ವರ್ಷ ಸಂಭವಿಸುತ್ತಿದೆ. ಅಣೆಕಟ್ಟೆಯ ಭದ್ರತೆ ದೃಷ್ಟಿಯಿಂದ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಒಳ್ಳೆಯದಲ್ಲ. ಇದರಿಂದ ಕೆ.ಆರ್.ಎಸ್. ಸುತ್ತಮುತ್ತಲಿನ ಪರಿಸರಕ್ಕೂ ಧಕ್ಕೆಯಾಗಲಿದೆ. ಈ ಯೋಜನೆಗಳಿಂದೇನೂ ಕೆ.ಆರ್.ಎಸ್. ಪ್ರಸಿದ್ಧಿಯಾಗಬೇಕಿಲ್ಲ. ಈಗಾಗಲೇ ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ದಿನನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ ಎಂದರು.
ಸರ್ಕಾರ ರೈತರ ಹೋರಾಟದ ಧ್ವನಿಯನ್ನು ಪರಿಗಣಿಸಿ, ಕೆ.ಆರ್.ಎಸ್. ಹೊರತುಪಡಿಸಿ ಮಳವಳ್ಳಿ ತಾಲ್ಲೂಕಿನ ಶಿಂಷಾ ಬ್ಲಫ್ ಅಥವಾ ಬೇರೆ ಸ್ಥಳಗಳಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಮಾಡಲಿ. ಕೆ.ಆರ್.ಎಸ್.ನಲ್ಲಿ ಯಾವುದೇ ಕಾರಣಕ್ಕೂ ನಿರ್ಮಾಣ ಮಾಡಬಾರದು ಎಂದು ಹೇಳಿದರು.
ಕಾವೇರಿ ಆರತಿಯನ್ನು ನಾವೇ ಮಾಡುತ್ತೇವೆ:
ಸಂಸ್ಕೃತಿಯಿಂದ ಬಂದಿರುವುದು ನಮ್ಮ ಮಂಡ್ಯ. ಹೊಸ ಪದ್ಧತಿ ಬೇಡ, ಕಾವೇರಿ ಆರತಿಗೆ ೯೨ ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಇದಕ್ಕೆ ಇಷ್ಟು ವೆಚ್ಚ ಬೇಕಾ ಎಂಬುದೇ ನನಗೂ ಆಶ್ಚರ್ಯವಾಗಿದೆ. ಬಿಜೆಪಿಯವರೇ ಕಡಿಮೆ ವೆಚ್ಚದಲ್ಲಿ ಕಾವೇರಿ ಆರತಿ ಮಾಡಿಕೊಡುತ್ತೇವೆ. ಹೊಸ ಪದ್ಧತಿ ಬೇಡ ಎಂದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…