ಮಂಡ್ಯ

ಯೋಗಾಭ್ಯಾಸ ಸ್ವಂತ ಶ್ರಮದ ಆರೋಗ್ಯ ವಿಮೆ : ಡಾ: ಕುಮಾರ ಅಭಿಮತ

ಮಂಡ್ಯ: ರೋಗವನ್ನು ದೂರವಿಟ್ಟಿ ಆರೋಗ್ಯವನ್ನು ವೃದ್ಧಿಸುವ ಶಕ್ತಿ ಯೋಗಾಭ್ಯಾಸಕ್ಕೆ ಇದೆ. ಯೋಗ ಎಂಬುದು ದಿನನಿತ್ಯ ರೂಡಿಸಿಕೊಂದರೆ, ಅದು ಹಣ ಕಟ್ಟದೆ ಸ್ವಂತ ಶ್ರಮದಿಂದ ಪಡೆಯುವ ಆರೋಗ್ಯ ವಿಮೆ ಇದ್ದಂತೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಭಿಪ್ರಾಯಪಟ್ಟರು.

ಅವರು ಇಂದು(ಜೂ.21) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 10 ನೇ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಯೋಗ ಮನಸ್ಸು ಹಾಗೂ ದೇಹದ ಆರೋಗ್ಯಕ್ಕೆ ಪೂರಕವಾಗಿದ್ದು, ಯೋಗವನ್ನು ಸಂಜೀವಿನಿ ಎಂದು ಕರೆಯಬಹುದು. ಪ್ರತಿಯೊಬ್ಬರೂ ದಿನದ 24 ಗಂಟೆಯಲ್ಲಿ ಒಂದು ಗಂಟೆ ಯೋಗಾಭ್ಯಾಸಕ್ಕೆ ಮೀಸಲಿಡಿ ಎಂದರು.

ಯೋಗ ಬಲ್ಲವನಿಗೆ ರೋಗದ ಭಯವಿಲ್ಲ, ರೋಗ ಇರುವವನಿಗೆ ಯೋಗದ ಅರಿವಿಲ್ಲ. ರೋಗ ಬರುವ ಮುಂಚೆ ಯ ಯೋಗಾಭ್ಯಾಸ ಮಾಡುವ ಯೋಗ ನಮ್ಮದಾಗಲಿ ಎಂದು ಹೇಳಿದರು.

ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರದಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮನಂದ ನಾಥ ಸ್ವಾಮೀಜಿ, ಮಾತನಾಡಿ ದೇಹ ದಂಡನೆ ಮಾಡಲು ಹೋಗಿ ಎಷ್ಟೋ ಜನರು ಪ್ರಾಣ ಕುತ್ತು ತಂದು ಕೊಂಡಿರುವವರು ಕೂಡ ಇದ್ದಾರೆ, ಆದರೆ ಯೋಗ ಮಾಡುವುದರಿಂದ ಯಾವುದೇ ತರಹ ಪ್ರಾಣ ಹಾನಿ ಇಲ್ಲ, ಹಣ ಖರ್ಚು ಮಾಡುವ ಆಗಿಲ್ಲ. ಹೆಚ್ಚು ಶ್ರಮ ಕೂಡ ಹಾಕುವ ಆಗಿಲ್ಲ ಆದ್ದರಿಂದ ಪ್ರತಿಯೊಬ್ಬರು ಕೂಡ ಯೋಗವನ್ನು ಮಾಡಿ ಮನಸ್ಸಿನ ನೆಮ್ಮದಿಯನ್ನು ಪಡೆದುಕೊಳ್ಳಿ ಎಂದು ಹೇಳಿದರು.

ಯೋಗಾಭ್ಯಾಸವನ್ನು ಕೇವಲ ಒಂದು ದಿನ ಮಾಡಿದರೆ ಸಾಲದು ಅದರ ಪ್ರಯೋಜನ ಕಂಡುಕೊಳ್ಳಬೇಕು ಎಂದರೆ ಪ್ರತಿನಿತ್ಯ ಯೋಗಾಭ್ಯಾಸವನ್ನು ಮಾಡಬೇಕು ಎಂದು ತಿಳಿಸಿದರು.

ಶ್ರೀರಂಗಪಟ್ಟಣ ಬೇಬಿ ಮಠ ಮತ್ತು ಚಂದ್ರವನಾಶ್ರಮ ಪೀಠಧ್ಯಕ್ಷರಾದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮಾತಾನಾಡಿ, ಇಡೀ ವಿಶ್ವಕ್ಕೆ ಯೋಗ ಪರಿಚಯಿಸಿದ ಹೆಮ್ಮೆ ಭಾರತ ದೇಶಕ್ಕಿದೆ. ಇಂದು ಎಲ್ಲಾ ರಾಷ್ಟ್ರಗಳ ಜೊತೆಗೆ ಏಕಕಾಲಿಕವಾಗಿ ಯೋಗದಿನಾಚರಣೆಯನ್ನು ಆಚರಿಸಲಾಗುತ್ತದೆ ಇದು ದೇಶದ ಹೆಗ್ಗಳಿಕೆ ಎಂದರು.

ದೇಹವನ್ನು ದಂಡಿಸದೆ ದೇಹಕ್ಕೆ ಹಾಗೂ ಮನಸ್ಸಿಗೆ ಉಲ್ಲಾಸ ಕೊಡುವ ಜೊತೆಗೆ ಸದೃಢ ಆರೋಗ್ಯವನ್ನು ಹೊಂದಲು ಯೋಗ ಬಹಳ ಉಪಯುಕ್ತವಾಗಿದೆ. ಶಾಲಾ ಪಠ್ಯ ಪುಸ್ತಕದಲ್ಲಿ ಎಲ್ಲಾ ವಿಷಯದ ಬಗ್ಗೆ ಪಾಠಗಳನ್ನು ಅಳವಡಿಸಿದ್ದಾರೆ ಅದೇ ರೀತಿ ಪಠ್ಯ ಪುಸ್ತಕ ದಲ್ಲಿ ಯೋಗ ಶಾಸ್ತ್ರವನ್ನು ಅಳವಡಿಸಿದರೆ ಆರೋಗ್ಯದ ಬಗ್ಗೆ ಅರಿವು ಹೆಚ್ಚಾಗುತ್ತದೆ ಎಂದು ಹೇಳಿದರು.

ಯೋಗಾಭ್ಯಾಸದಿಂದ ಅಂಗಾಂಗಗಳು ಬಲವಾಗುತ್ತವೆ, ಕಣ್ಣುಗಳು ದೃಷ್ಟಿ ಚೆನ್ನಾಗಿರುತ್ತದೆ, ಯಾವುದೇ ಅನಾರೋಗ್ಯವು ಸಹ ನಮ್ಮ ಬಳಿ ಸುಳಿಯುವುದಿಲ್ಲ ಆದ್ದರಿಂದ ದಿನ ನಿತ್ಯ ಯೋಗಾಭ್ಯಾಸ ಮಾಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜ್, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಸೀತಾಲಕ್ಷ್ಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಓಂ ಪ್ರಕಾಶ್, ನೆಹರು ಯುವ ಕೇಂದ್ರದ ಅಧಿಕಾರಿ ರಾಜೇಶ್ ಕಾರಂತ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಶಂಕರನಾರಾಯಣ ಶಾಸ್ತ್ರಿ, ರೆಡ್ ಕ್ರಾಸ್ ಸಂಸ್ಥೆಯ ಗೌರವಾಧ್ಯಕ್ಷರಾದ ಮೀರಾಶಿವಲಿಂಗಯ್ಯ, , ಭಾರತ ಸ್ಕೌಟ್ಸ್ ಅಂಡ್ ಗೈಡ್ ನ ಭಕ್ತವತ್ಸಲ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

20 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago