ಪ್ರಶಾಂತ್ ಎನ್.ಮಲ್ಲಿಕ್
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅವ್ವೆಹಳ್ಳಿಯಲ್ಲಿ ತರಗಲೆಗೆ ಬೆಂಕಿ ಹಚ್ಚುವಾಗ ಹಾವು ಕಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ದುರಂತದಲ್ಲಿ ಮೃತಪಟ್ಟ ವ್ಯಕ್ತಿಯನ್ನು 24 ವರ್ಷದ ಸಂಜಯ್ ಎಂಬಾತನೆಂದು ಗುರುತಿಸಲಾಗಿದೆ.
ಮೃತ ದುರ್ದೈವಿಯೂ ಟಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ನಿವಾಸಿ ಎನ್ನಲಾಗಿದೆ. ಸಂಜಯ್ ತಮ್ಮ ಅಜ್ಜಿ ಮನೆಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.





