ಮಂಡ್ಯ

ಮಂಡ್ಯ: ಪ್ರಿಯತಮೆಯನ್ನು ಕೊಂದು ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟ ಯುವಕ

ಮಂಡ್ಯ: ಯುವಕನೋರ್ವ ಪ್ರಿಯತಮೆಯನ್ನು ಕೊಂದು ತನ್ನ ಜಮೀನಿನಲ್ಲೇ ಶವ ಬಚ್ಚಿಟ್ಟ ಘಟನೆ ಮಂಡ್ಯದ ಕರೋಟಿ ಗ್ರಾಮದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ ಎಂಬುವವರೇ ಹತ್ಯೆಯಾದ ಮಹಿಳೆಯಾಗಿದ್ದಾರೆ. ಪುನೀತ್‌ ಎಂಬಾತನೇ ಕೊಲೆಮಾಡಿದ ಆರೋಪಿಯಾಗಿದ್ದಾನೆ.

ಪ್ರೀತಿಗೆ ಮದುವೆಯಾಗಿ ಮಕ್ಕಳಿದ್ದರೂ ಪುನೀತ್‌ ಹಿಂದೆ ಬಿದ್ದಿದ್ದಳು. ಕಳೆದ ಭಾನುವಾರ ಮೈಸೂರು, ಮಂಡ್ಯ ಎಂದು ಟ್ರಿಪ್‌ ಹೋಗಿದ್ದ ಇಬ್ಬರು ಜಾಲಿಯಾಗಿ ಸಮಯ ಕಳೆದಿದ್ದರು.

ನಂತರ ಏನಾಯ್ತೋ ಗೊತ್ತಿಲ್ಲ. ಕೆ.ಆರ್.‌ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ. ನಂತರ ಈತ ಆಕೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟು ಪರಾರಿಯಾಗಿದ್ದಾನೆ.

ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಪುನೀತ್‌ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರೋಪಿ ಪುನೀತ್‌ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದು, ಪ್ರೀತಿ ಮದುವೆಯಾಗಿ ಮಕ್ಕಳಿದ್ದರೂ ಪುನೀತ್‌ ಹಿಂದೆ ಬಿದ್ದು ದುರಂತ ಅಂತ್ಯ ಕಂಡಿದ್ದಾಳೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

36 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

47 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago