ಮಂಡ್ಯ

ಮದ್ದೂರು| ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನ ಕೊಲೆ

ಮದ್ದೂರು: ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ 35 ವರ್ಷದ ಅರುಣ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಅರುಣ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ನಿನ್ನೆ ತಾನೇ ಗ್ರಾಮಕ್ಕೆ ಬಂದಿದ್ದು, ಸಂಜೆ ಕೆಸ್ತೂರು ಸರ್ಕಲ್ ಬಳಿ ಇರುವ ಬಾರ್ ಅಂಡ್ ರೆಸ್ಟೋರೆಂಟ್ ಸ್ನೇಹಿತರೊಂದಿಗೆ ಸೇರಿ ಪಾನಮತ್ತನಾಗಿದ್ದ. ಈ ವೇಳೆ ಅವನು ಕುಳಿತಿದ್ದ ಪಕ್ಕದ ಟೇಬಲ್‌ನಲ್ಲಿ ಜಗಳ ನಡೆಯುತ್ತಿತ್ತು. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ನಂತರ ಅರುಣ್‌ ಹಾಗೂ ಸ್ನೇಹಿತರು ಸ್ಥಳದಿಂದ ಹೊರಟಾಗ ಹಿಂದಿನಿಂದಲೇ ಬಂದ ಪಾನಮತ್ತ ಯುವಕರು ಡ್ರ್ಯಾಗನ್‌ ಹಾಗೂ ಲಾಂಗ್‌ನಿಂದ ಅರುಣ್‌ಗೆ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ. ಕದಲೂರು ಸ್ಕಂದನ್ ಲೇಔಟ್ ಹೋಗುವ ರಸ್ತೆಯ ಪಕ್ಕದ ಅರುಣ್‌ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಯಾದ ಅರುಣ್ ಶವವನ್ನು ಮಂಡ್ಯ ವಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

1 hour ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

2 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

3 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

8 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

9 hours ago