ಮಂಡ್ಯ

ಮದ್ದೂರು| ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನ ಕೊಲೆ

ಮದ್ದೂರು: ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ 35 ವರ್ಷದ ಅರುಣ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಅರುಣ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ನಿನ್ನೆ ತಾನೇ ಗ್ರಾಮಕ್ಕೆ ಬಂದಿದ್ದು, ಸಂಜೆ ಕೆಸ್ತೂರು ಸರ್ಕಲ್ ಬಳಿ ಇರುವ ಬಾರ್ ಅಂಡ್ ರೆಸ್ಟೋರೆಂಟ್ ಸ್ನೇಹಿತರೊಂದಿಗೆ ಸೇರಿ ಪಾನಮತ್ತನಾಗಿದ್ದ. ಈ ವೇಳೆ ಅವನು ಕುಳಿತಿದ್ದ ಪಕ್ಕದ ಟೇಬಲ್‌ನಲ್ಲಿ ಜಗಳ ನಡೆಯುತ್ತಿತ್ತು. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ನಂತರ ಅರುಣ್‌ ಹಾಗೂ ಸ್ನೇಹಿತರು ಸ್ಥಳದಿಂದ ಹೊರಟಾಗ ಹಿಂದಿನಿಂದಲೇ ಬಂದ ಪಾನಮತ್ತ ಯುವಕರು ಡ್ರ್ಯಾಗನ್‌ ಹಾಗೂ ಲಾಂಗ್‌ನಿಂದ ಅರುಣ್‌ಗೆ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ. ಕದಲೂರು ಸ್ಕಂದನ್ ಲೇಔಟ್ ಹೋಗುವ ರಸ್ತೆಯ ಪಕ್ಕದ ಅರುಣ್‌ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಯಾದ ಅರುಣ್ ಶವವನ್ನು ಮಂಡ್ಯ ವಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

16 mins ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

49 mins ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

59 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

3 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

4 hours ago