ಮಂಡ್ಯ

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ

ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದರಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ. ಶೋಭಾರಾಣಿ ಅವರು ಹೇಳಿದರು.

ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಂಚಾರ ಪೊಲೀಸ್ ಇಲಾಖೆಯ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ೨೦೨೬ರ ಅಂಗವಾಗಿ ಮಂಗಳವಾರ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ‘ಜಾಗೃತಿ ಜಾಥಾ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಸ್ತೆ ಅಪಘಾತಗಳು ಎರಡು ರೀತಿಯಲ್ಲಿ ನಡೆಯುತ್ತವೆ. ಅದರಲ್ಲಿ ರಸ್ತೆ ಸರಿಯಿಲ್ಲದೆ ಹಾಗೂ ಸಂಚಾರ ನಿಯಮ ಉಲ್ಲಂಘನೆಯಿಂದಾಗಿ. ಹೀಗಾಗಿ ರಸ್ತೆ ಸುರಕ್ಷತೆ ಬಗ್ಗೆ ಎಲ್ಲರೂ ಜಾಗೃತರಾಗಬೇಕು. ಹೆಲ್ಮೆಟ್ ಧರಿಸದೆ ವಾಹನ ಚಾಲನೆ, ದ್ವಿಚಕ್ರ ವಾಹನಗಳಲ್ಲಿ ಮೂರು ಮಂದಿ ಕುಳಿತು ಚಾಲನೆ ಮಾಡುವುದು, ವಾಹನ ಚಲಿಸುವಾಗ ಮೊಬೈಲ್ ಬಳಕೆ ಮಾಡುವುದು ಕಾನೂನು ಬಾಹಿರ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ರಸ್ತೆ ಅಪಘಾತಗಳು ನಡೆಯುತ್ತವೆ. ಪ್ರತಿ ವರ್ಷ ಸುಮಾರು ೫೦೦ರಿಂದ ೬೦೦ ಮಂದಿ ರಸ್ತೆ ಅಪಘಾತದಿಂದ ಸಾವನಪ್ಪುತ್ತಿರುವುದು ವಿಷಾದಕರ ಸಂಗತಿ. ಇದನ್ನು ತಡೆಗಟ್ಟಲು ಸುರಕ್ಷತೆಯಾಗಿ ವಾಹನ ಚಾಲನೆ ಮಾಡುವುದರ ಜೊತೆಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ಸಂಚಾರ ನಿಯಮಗಳ ಪಾಲನೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು, ವರ್ಷ ಪೂರ್ತಿ ರಸ್ತೆ ಸುರಕ್ಷತೆ ನಿಯಮ ಪಾಲನೆ ಮಾಡುವುದು ಕಡ್ಡಾಯ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ ಮಾತನಾಡಿ, ವಾಹನ ಚಾಲನೆಯಲ್ಲಿ ಯುವಜನತೆ ಸಾಕಷ್ಟು ಪ್ರಮಾಣದಲ್ಲಿ ಸಾವನ್ನಪ್ಪುತ್ತಿರುವುದು ವಿಷಾದಕಾರ ಸಂಗತಿ. ಯುವ ಜನತೆ ಹಾಗೂ ಸಾರ್ವಜನಿಕರು ಸಂಚಾರ ನಿಯಮ ಪಾಲನೆ ಮಾಡುವುದು ಕಡ್ಡಾಯ ಎಂದರು

ಜಾಥಾದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಇ. ತಿಮ್ಮಯ್ಯ. ಗಂಗಾಧರಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚೆಲುವಯ್ಯ, ಡಿವೈಎಸ್ಪಿ ಎಚ್. ಲಕ್ಷ್ಮಿನಾರಾಯಣ ಪ್ರಸಾದ್, ಮಂಡ್ಯ ಸಂಚಾರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಎಚ್.ಆರ್. ಸಿದ್ದಪ್ಪ ಭಾಗವಹಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago