ಮಂಡ್ಯ: ಯುವಕರು ಸ್ವಾಮಿ ವಿವೇಕಾನಂದರ ಚಿಂತನೆ ಹಾಗೂ ಆದರ್ಶಗಳನ್ನು ತಮ್ಮ ಜೀವನದಲ್ಲಿ ರೂಡಿಸಿಕೊಳ್ಳುವಂತೆ ಎಂದು ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್-ನೆಹರು ಯುವ ಕೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ರಾಮಕೃಷ್ಣ ವಿವೇಕಾನಂದ ಆಶ್ರಮ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ‘ರಾಷ್ಟ್ರೀಯ ಯುವ ದಿನಾಚರಣೆʼಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವದಂದು ಹೆಚ್ಚಿನ ಸಂಖ್ಯೆಯಲ್ಲಿ ಯುವಕ ಯುವತಿಯರು ಪಾಲ್ಗೊಂಡಿರುವುದು ಸಂತೋಷದ ವಿಷಯ ಎಂದರು .
ಯುವಜನತೆ ರಾಮಕೃಷ್ಣ ಆಶ್ರಮಕ್ಕೆ ತಿಂಗಳಿಗೊಮ್ಮೆ ಅಥವಾ ವಾರಕ್ಕೊಮ್ಮೆ ಆದರೂ ಭೇಟಿ ನೀಡಿ, ಗುರುಗಳೊಂದಿಗೆ ಸಂವಾದ ನಡೆಸಿ ಜ್ಞಾನ ವೃದ್ಧಿಸಿಕೊಳ್ಳಿ, ಜೀವನದಲ್ಲಿ ಶ್ರದ್ಧೆ, ಭಕ್ತಿ, ಶಿಸ್ತು, ಪ್ರೀತಿಯನ್ನು ಅನುಸರಿಸಿದರೆ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ಹೇಳಿದರು.
ರಾಮಕೃಷ್ಣ ಆಶ್ರಮದ ಮಂಜು ಮಹಾರಾಜ್ ಸ್ವಾಮಿ ಮಾತನಾಡಿ, ವಿವೇಕಾನಂದರ ಸಂದೇಶಗಳನ್ನು ನಿರ್ಲಕ್ಷಿಸಿದರೆ ಮುಂದೊಂದು ದಿನ ದೊಡ್ಡಬೆಲೆ ತೆರಬೇಕಾಗುತ್ತದೆ. ವಿವೇಕಾನಂದರ ಕನಸು ನನಸಾಗಬೇಕಾದರೆ ಯುವ ಜನತೆ ಎಚ್ಚೆತ್ತುಕೊಳ್ಳಬೇಕು, ಯುವ ಜನತೆ ದಿನದಲ್ಲಿ ಕೆಲವು ನಿಮಿಷಗಳಾದರೂ ವಿವೇಕಾನಂದರ ವಿಚಾರಗಳು ಅಧ್ಯಯನ ಮಾಡುವುದರೊಂದಿಗೆ ಅನುಸರಿಸಿ, ದೇಶದ ಭವಿಷ್ಯ ಉಜ್ವಲವಾಗುವಂತೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ಗಣ್ಯರಾದ ಬಿ.ಎಸ್ ಅನುಪಮ, ಜಿ ಪ್ರಕಾಶ್, ಅನಿಲ್ ಕುಮಾರ್, ಕುಮಾರ್ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…