ಮಂಡ್ಯ

ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಜಿ.ಪಂ. ಸಿಇಓ ಭೇಟಿ : ಸೌಲಭ್ಯಗಳ ಪರಿಶೀಲನೆ

ಮಂಡ್ಯ : ಮಂಡ್ಯ ತಾಲ್ಲೂಕಿನ ಯಲಿಯೂರು ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸೌಲಭ್ಯಗಳ ಬಗ್ಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಪರಿಶೀಲನೆ ನಡೆಸಿದರು.
ಬುಧವಾರ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ವೈದ್ಯರ ಹಾಜರಾತಿ, ಶೌಚಾಲಯ, ಕುಡಿಯುವ ನೀರು, ಹಾಸಿಗೆ ವ್ಯವಸ್ಥೆ, ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಔಷದಗಳ ಲಭ್ಯತೆ, ಲ್ಯಾಬ್ ಗಳ ಕಾರ್ಯನಿರ್ವಹಣೆ, ತುರ್ತು ಸೇವಾ ಸೌಲಭ್ಯಗಳು, ಲಸಿಕೆ ಕಾರ್ಯಕ್ರಮಗಳು ಹಾಗೂ ವಹಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿದ್ದ ಸಾರ್ವಜನಿಕರೊಂದಿಗೆ ಚರ್ಚಿಸಿ, ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ಆಸ್ಪತ್ರೆಯಿಂದ ದೊರೆಯುತ್ತಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ರೋಗಿಗಳಿಗೆ ಸೂಕ್ತ ಚಿಕಿತ್ಸೆಗಳು ಸೂಕ್ತ ಸಂದರ್ಭದಲ್ಲಿ ದೊರೆಯಬೇಕು ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಸೂಚಿಸಿದ ಅವರು ಆಸ್ಪತ್ರೆಯ ಸ್ವಚ್ಛತೆ ಹಾಗೂ ಆಸ್ಪತ್ರೆಯಲ್ಲಿನ ದಾಖಲಾತಿ ನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಆಸ್ಪತ್ರೆ ಉನ್ನತೀಕರಣ: ಯಲಿಯೂರು ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಎ.ಬಿ.ಎ.ಆರ್.ಕೆ ಯೋಜನೆಯಡಿ ನವೀಕರಣಗೊಳಿಸಲಾಗಿದ್ದು, ಎನ್.ಕ್ಯೂ.ಎ.ಎಸ್. ಮತ್ತು ಕಾಯಕಲ್ಪ ಮಾನದಂಡವನ್ನು ಆಧರಿಸಿ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲಾಗಿದ್ದು, ಆಸ್ಪತ್ರೆಯಲ್ಲಿನ ಸೌಲಭ್ಯಗಳ ಬಗ್ಗೆ ಸಿಇಓ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಯಲಿಯೂರು ಆಸ್ಪತ್ರೆಯ ವೈದ್ಯರಾದ ಎಸ್ ಡಿ ಚಂದ್ರಶೇಖರ್, ಕೆ.ಶೆಟ್ಟಹಳ್ಳಿ ಆಸ್ಪತ್ರೆಯ ವೈದ್ಯರಾದ ಉಷಾ, ಯಲಿಯೂರು ಆಸ್ಪತ್ರೆಯ ಫಾರ್ಮಸಿ ಅಧಿಕಾರಿ ವಿಜಯ್ ಕುಮಾರ್ ವಿ ಎನ್ ಹಾಗೂ ಯಲಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಸನ್ನ ಸೇರಿದಂತೆ ಇತರರು ಹಾಜರಿದ್ದರು.
ಆಂದೋಲನ ಡೆಸ್ಕ್

Recent Posts

ಸಂವಿಧಾನ ರಕ್ಷಿಸಿದ್ರೆ, ದೇಶ ಸುಭದ್ರ : ಸಿಎಂ

ಬೆಂಗಳೂರು : ಸಂವಿಧಾನವನ್ನ ದುರ್ಬಲಗೊಳಿಸುವ ಪ್ರಯತ್ನ ನಡೆಸುವುದು ವಿಷ ಉಣಿಸುವ ಸಂಚು. ಸಂವಿಧಾನವನ್ನ ನಾವು ರಕ್ಷಿಸಿದ್ರೆ ಸಂವಿಧಾನ ನಮ್ಮನ್ನ ರಕ್ಷಿಸುತ್ತದೆ.…

27 mins ago

ಗಣರಾಜ್ಯೋತ್ಸವ ಸಂಭ್ರಮ | ಕರ್ತವ್ಯಪಥದಲ್ಲಿ ಸೇನಾ ಶಕ್ತಿಯ ಅನಾವರಣ

ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…

1 hour ago

ಗಣರಾಜ್ಯ ರಕ್ಷಣೆಗೆ ಸಾಮೂಹಿಕ ಎಚ್ಚರಿಕೆಯ ಕರೆ ನೀಡಿದ ಮಮತಾ

ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…

2 hours ago

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…

3 hours ago

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…

3 hours ago

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

3 hours ago