ಜಿಲ್ಲೆಗಳು

ಮಂಗಳೂರು ಕುಕ್ಕರ್‌ಬಾಂಬ್ ಸ್ಫೋಟ: ಮೈಸೂರಿನಲ್ಲಿ ತನಿಖೆ ಚುರುಕು

ಮೈಸೂರು: ಮಂಗಳೂರು ಕುಕ್ಕರ್‌ಬಾಂಬ್ ಸ್ಫೋಟಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರೇ ಮೈಸೂರಿನಲ್ಲಿ ತನಿಖೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಶಾರಿಖ್ ಸಹಚರ ಎನ್ನಲಾದ ರಾಜೀವನಗರದ ಕ್ರಿಶ್ಚಿಯನ್ ಕಾಲೋನಿಯ ಮೊಹಮ್ಮದ್ ರೂರುಲ್ಲಾನನ್ನು ಮಂಗಳೂರು ಪೊಲೀಸರು ನಗರದಲ್ಲಿರುವ ಆತನ ಮನೆಗೆ ಕರೆತಂದು ಪರಿಶೀಲನೆ ಮಾಡಿದ್ದಾರೆ ಎನ್ನಲಾಗಿದ್ದು, ಮನೆಯಲ್ಲಿ ಏನು ಸಿಕ್ಕಿಲ್ಲ ಎಂದು ಪೊಲೀಸ ಮೂಲಗಳು ತಿಳಿಸಿವೆ.

ಇನ್ನು ಶಾರಿಖ್ ಲೋಕನಾಯಕನಗರದಲ್ಲಿ ಬಾಡಿಗೆ ರೂಮ್ ಮಾಡುವ ಮುನ್ನ ಕೆಲವು ದಿನಗಳು ಮೊಹಮ್ಮದ್ ರೂರುಲ್ಲಾ ಮನೆಯಲ್ಲಿ ಇದ್ದ. ಆನಂತರ ಲೋಕನಾಯಕನಗರದಲ್ಲಿ ನಕಲಿ ಆಧಾರ್ ಕಾರ್ಡ್ ನೀಡಿ ಪ್ರೇಮರಾಜ್ ಹೆಸರಿನಲ್ಲಿ ರೂಮ್ ಬಾಡಿಗೆ ಪಡೆದಿದ್ದ ಎನ್ನಲಾಗಿದೆ.

ಇನ್ನು ಸುಮಾರು ೧೦ಕ್ಕೂ ಹೆಚ್ಚು ಮೊಬೈಲ್ ಪೋನ್‌ಗಳನ್ನು ಶಾರಿಖ್‌ಗೆ ನೀಡಿದ್ದ ಎನ್ನಲಾದ ಸೈಯದ್ ಮೊಹಮದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ ಎನ್ನಲಾಗಿದೆ.

ಶಾರಿಖ್ ಮೊಬೈಲ್ ರಿಪೇರಿ ಕಲಿಯುತ್ತಿದ್ದ ಎನ್ನಲಾದ ಅಗ್ರಹಾರದ ಮೊಬೈಲ್ ರಿಪೇರಿ ತರಬೇತಿ ಕೇಂದ್ರವೊಂದರ ಮಾಲೀಕನನ್ನು ಪೊಲೀಸರು ವಿಚಾರಣೆ ಮಾಡಿದ್ದು, ಶಾರಿಖ್ ಮತ್ತು ಸೈಯದ್ ಮೊಹಮದ್ ಇಬ್ಬರು ಒಟ್ಟಿಗೆ ಮೊಬೈಲ್ ರಿಪೇರಿ ತರಬೇತಿಗೆ ಸೇರಿದ್ದರು. ಸೈಯದ್ ಮೊಹಮದ್ ತರಬೇತಿಯನ್ನು ಪೂರ್ಣ ಮಾಡಿ, ಪ್ರಮಾಣ ಪತ್ರವನ್ನು ಪಡೆದಿದ್ದ. ಆದರೆ, ಶಾರಿಖ್ ತರಬೇತಿ ಪೂರ್ಣವಾಗಿರಲಿಲ್ಲ ಎನ್ನಲಾಗಿದೆ.

ಶಾರಿಖ್‌ಗೆ ಮನೆ ಬಾಡಿಗೆ ನೀಡಿದ್ದ ಮಾಲೀಕ ಲೋಕನಾಯಕನಗರದ ಮೋಹನ್ ಕುಮಾರ ಅನ್ನು ವಿಚಾರಣೆ ಮಾಡಿದ್ದು, ದಾಖಲೆಗಳನ್ನು ಸರಿಯಾಗಿ ಪರಿಶೀಲನೆ ಮಾಡಿಲ್ಲ. ಶಾರಿಖ್ ಇದ್ದ ರೂಮ್ ಅನ್ನು ಮೊದಲಿಗೆ ೫೦೦ ರೂ.ಗೆ ಬಾಡಿಗೆ ನೀಡಲಾಗಿತ್ತು. ಪ್ರೇಮರಾಜ್ ಹೆಸರಿನ ಶಾರಿಖ್ ೧೮೦೦ ರೂ. ಬಾಡಿಗೆ ನೀಡುತ್ತಿದ್ದ. ಬಾಡಿಗೆ ಹಣ ನೀಡಲು ಸತಾಯಿಸುತ್ತಿದ್ದ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತನಿಖೆ ಉದ್ದೇಶದಿಂದ ಶಾರಿಖ್ ಇದ್ದ ರೂಮ್ ಬೀಗಹಾಕಿ ಸೀಲ್ ಮಾಡಲಾಗಿದೆ ಎನ್ನಲಾಗಿದೆ.

 

ಕೊಯಂಬುತ್ತೂರಿನಲ್ಲಿ ಆಗಿದ್ದ ಬ್ಲಾಸ್ಟ್‌ಗೆ ಸಂಬಂಧ ಮೈಸೂರಿನ ನಂಟು ಏನಾದರೂ ಇದೆಯೇ? ಎಂಬ ಹಿನ್ನೆಲೆಯಲ್ಲಿ ಸೋಮವಾರ ತಮಿಳುನಾಡಿನ ಪೊಲೀಸರು ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಅಕ್ಟೋಬರ್‌ನಲ್ಲಿ ಕೊಯಂಬುತ್ತೂರಿನಲ್ಲಿ ಮಾರುತಿ ೮೦೦ ಕಾರ್ ಒಂದು ಬ್ಲಾಸ್ಟ್ ಆಗಿತ್ತು. ಈ ಪ್ರಕರಣದಲ್ಲಿ ಒಬ್ಬರು ಮೃತಪಟ್ಟಿದ್ದರು. ಸಧ್ಯ ಇದನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ಮಾಡುತ್ತಿದೆ.

andolana

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

8 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

8 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

8 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

9 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

11 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

12 hours ago