ಜಿಲ್ಲೆಗಳು

ಮಂಗಳೂರು ಕುಕ್ಕರ್‌ಬಾಂಬ್ ಸ್ಫೋಟ: ಮೈಸೂರಿನಲ್ಲಿ ತನಿಖೆ ಚುರುಕು

ಮೈಸೂರು: ಮಂಗಳೂರು ಕುಕ್ಕರ್‌ಬಾಂಬ್ ಸ್ಫೋಟಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರೇ ಮೈಸೂರಿನಲ್ಲಿ ತನಿಖೆ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಶಾರಿಖ್ ಸಹಚರ ಎನ್ನಲಾದ ರಾಜೀವನಗರದ ಕ್ರಿಶ್ಚಿಯನ್ ಕಾಲೋನಿಯ ಮೊಹಮ್ಮದ್ ರೂರುಲ್ಲಾನನ್ನು ಮಂಗಳೂರು ಪೊಲೀಸರು ನಗರದಲ್ಲಿರುವ ಆತನ ಮನೆಗೆ ಕರೆತಂದು ಪರಿಶೀಲನೆ ಮಾಡಿದ್ದಾರೆ ಎನ್ನಲಾಗಿದ್ದು, ಮನೆಯಲ್ಲಿ ಏನು ಸಿಕ್ಕಿಲ್ಲ ಎಂದು ಪೊಲೀಸ ಮೂಲಗಳು ತಿಳಿಸಿವೆ.

ಇನ್ನು ಶಾರಿಖ್ ಲೋಕನಾಯಕನಗರದಲ್ಲಿ ಬಾಡಿಗೆ ರೂಮ್ ಮಾಡುವ ಮುನ್ನ ಕೆಲವು ದಿನಗಳು ಮೊಹಮ್ಮದ್ ರೂರುಲ್ಲಾ ಮನೆಯಲ್ಲಿ ಇದ್ದ. ಆನಂತರ ಲೋಕನಾಯಕನಗರದಲ್ಲಿ ನಕಲಿ ಆಧಾರ್ ಕಾರ್ಡ್ ನೀಡಿ ಪ್ರೇಮರಾಜ್ ಹೆಸರಿನಲ್ಲಿ ರೂಮ್ ಬಾಡಿಗೆ ಪಡೆದಿದ್ದ ಎನ್ನಲಾಗಿದೆ.

ಇನ್ನು ಸುಮಾರು ೧೦ಕ್ಕೂ ಹೆಚ್ಚು ಮೊಬೈಲ್ ಪೋನ್‌ಗಳನ್ನು ಶಾರಿಖ್‌ಗೆ ನೀಡಿದ್ದ ಎನ್ನಲಾದ ಸೈಯದ್ ಮೊಹಮದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ ಎನ್ನಲಾಗಿದೆ.

ಶಾರಿಖ್ ಮೊಬೈಲ್ ರಿಪೇರಿ ಕಲಿಯುತ್ತಿದ್ದ ಎನ್ನಲಾದ ಅಗ್ರಹಾರದ ಮೊಬೈಲ್ ರಿಪೇರಿ ತರಬೇತಿ ಕೇಂದ್ರವೊಂದರ ಮಾಲೀಕನನ್ನು ಪೊಲೀಸರು ವಿಚಾರಣೆ ಮಾಡಿದ್ದು, ಶಾರಿಖ್ ಮತ್ತು ಸೈಯದ್ ಮೊಹಮದ್ ಇಬ್ಬರು ಒಟ್ಟಿಗೆ ಮೊಬೈಲ್ ರಿಪೇರಿ ತರಬೇತಿಗೆ ಸೇರಿದ್ದರು. ಸೈಯದ್ ಮೊಹಮದ್ ತರಬೇತಿಯನ್ನು ಪೂರ್ಣ ಮಾಡಿ, ಪ್ರಮಾಣ ಪತ್ರವನ್ನು ಪಡೆದಿದ್ದ. ಆದರೆ, ಶಾರಿಖ್ ತರಬೇತಿ ಪೂರ್ಣವಾಗಿರಲಿಲ್ಲ ಎನ್ನಲಾಗಿದೆ.

ಶಾರಿಖ್‌ಗೆ ಮನೆ ಬಾಡಿಗೆ ನೀಡಿದ್ದ ಮಾಲೀಕ ಲೋಕನಾಯಕನಗರದ ಮೋಹನ್ ಕುಮಾರ ಅನ್ನು ವಿಚಾರಣೆ ಮಾಡಿದ್ದು, ದಾಖಲೆಗಳನ್ನು ಸರಿಯಾಗಿ ಪರಿಶೀಲನೆ ಮಾಡಿಲ್ಲ. ಶಾರಿಖ್ ಇದ್ದ ರೂಮ್ ಅನ್ನು ಮೊದಲಿಗೆ ೫೦೦ ರೂ.ಗೆ ಬಾಡಿಗೆ ನೀಡಲಾಗಿತ್ತು. ಪ್ರೇಮರಾಜ್ ಹೆಸರಿನ ಶಾರಿಖ್ ೧೮೦೦ ರೂ. ಬಾಡಿಗೆ ನೀಡುತ್ತಿದ್ದ. ಬಾಡಿಗೆ ಹಣ ನೀಡಲು ಸತಾಯಿಸುತ್ತಿದ್ದ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತನಿಖೆ ಉದ್ದೇಶದಿಂದ ಶಾರಿಖ್ ಇದ್ದ ರೂಮ್ ಬೀಗಹಾಕಿ ಸೀಲ್ ಮಾಡಲಾಗಿದೆ ಎನ್ನಲಾಗಿದೆ.

 

ಕೊಯಂಬುತ್ತೂರಿನಲ್ಲಿ ಆಗಿದ್ದ ಬ್ಲಾಸ್ಟ್‌ಗೆ ಸಂಬಂಧ ಮೈಸೂರಿನ ನಂಟು ಏನಾದರೂ ಇದೆಯೇ? ಎಂಬ ಹಿನ್ನೆಲೆಯಲ್ಲಿ ಸೋಮವಾರ ತಮಿಳುನಾಡಿನ ಪೊಲೀಸರು ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಅಕ್ಟೋಬರ್‌ನಲ್ಲಿ ಕೊಯಂಬುತ್ತೂರಿನಲ್ಲಿ ಮಾರುತಿ ೮೦೦ ಕಾರ್ ಒಂದು ಬ್ಲಾಸ್ಟ್ ಆಗಿತ್ತು. ಈ ಪ್ರಕರಣದಲ್ಲಿ ಒಬ್ಬರು ಮೃತಪಟ್ಟಿದ್ದರು. ಸಧ್ಯ ಇದನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ಮಾಡುತ್ತಿದೆ.

andolana

Recent Posts

ಮರ್ಯಾದೆಗೇಡೆ ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

19 mins ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

54 mins ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

1 hour ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

1 hour ago

ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…

2 hours ago

ಹೈಕಮಾಂಡ್‌ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಹೈಕಮಾಂಡ್‌ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌…

2 hours ago