ಜಿಲ್ಲೆಗಳು

ಮಲ್ಲಪ್ಪ ಬೆಟ್ಟದ ನರಹಂತಕ ಚಿರತೆ ಸೆರೆ

ಮಹಾರಾಜ ಕಾಲೇಜು ವಿದ್ಯಾರ್ಥಿಯನ್ನು ಬಲಿ ಪಡೆದ ಚಿರತೆ ಕೊನೆಗೂ ಸೆರೆ
ತಿ.ನರಸೀಪುರ: ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಚಿರತೆಗಳ ಪೈಕಿ ಒಂದು ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಎರಡು ತಿಂಗಳ ಹಿಂದೆ ಮಹಾರಾಜ ಕಾಲೇಜು ವಿದ್ಯಾರ್ಥಿಯನ್ನು ಬಲಿ ಪಡೆದ ಚಿರತೆ ತಾಲೂಕಿನ ಎಂ.ಎಲ್.ಹುಂಡಿ ಗ್ರಾಮದ ಮಲ್ಲಪ್ಪನ ಬೆಟ್ಟದಲ್ಲಿ ಸೆರೆ ಸಿಕ್ಕಿದೆ.
ಶುಕ್ರವಾರ ಮುಂಜಾನೆ 4 ಘಂಟೆ ಸಮಯದಲ್ಲಿ ಸೆರೆ ಸಿಕ್ಕ ಚಿರತೆ ಸುಮಾರು 8 ವರ್ಷಗಳ ಗಂಡು ಚಿರತೆಯಾಗಿದ್ದು ದಷ್ಟಪುಷ್ಟವಾಗಿದೆ.
ಅಕ್ಟೋಬರ್ 30 ರಂದು ಮಹಾರಾಜ ಕಾಲೇಜು ಬಿಕಾಂ ವಿದ್ಯಾರ್ಥಿಯಾಗಿದ್ದ ಎಂ.ಎಲ್. ಹುಂಡಿ ಗ್ರಾಮದ ಮಂಜುನಾಥ್ ಸ್ನೇಹಿತರ ಜಾತ್ರೆಗೆ ಹೊರಟಿದ್ದ ವೇಳೆ ಇದೇ ಬೆಟ್ಟದಲ್ಲಿ ಚಿರತೆ ದಾಳಿಗೆ ಬಲಿಯಾಗಿದ್ದ. ಇದೀಗ ಸೆರೆ ಸಿಕ್ಕ ಚಿರತೆ ಇದೇ ಆಗಿರಬಹುದು ಎಂದು ಗುರುತಿಸಲಾಗಿದೆ. ಮಂಜುನಾಥ್ ಸಾವಿನ ಬೆನ್ನಿಗೇ ತಾಲ್ಲೂಕಿನ ಎಸ್. ಕೆಬ್ಬೆಹುಂಡಿ ಗ್ರಾಮದ ಮೇಘನಾ ಕೂಡ ಚಿರತೆ ದಾಳಿಗೆ ಬಲಿಯಾಗಿದ್ದು ಚಿರತೆಗಳನ್ನು ಹಿಡಿಯದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ನರಹಂತಕ ಚಿರತೆಗಳನ್ನು ಕಂಡಲ್ಲಿ ಗುಂಡಿಕ್ಕಲು ಸರಕಾರ ಆದೇಶ ನೀಡಿತ್ತು. ಅರಣ್ಯ ಇಲಾಖೆಯು ಡಿ. 2 ನಂತರ ನುರಿತ 4 ತಂಡಗಳನ್ನು ಬಳಸಿಕೊಂಡು ಚಿರತೆಯ ಸೆರೆಗೆ ಕಾರ್ಯಾಚರಣೆ ಆರಂಭಿಸಿತ್ತು. ಚಿರತೆ ಸೆರೆಗಾಗಿ ಮಲ್ಲಪ್ಪ ಬೆಟ್ಟ ಮತ್ತು ಕೆಬ್ಬೆ ಹುಂಡಿ ಸುತ್ತಮುತ್ತ ಬೋನುಗಳನ್ನು ಇಡಲಾಗಿತ್ತು.
ಚಿರತೆಯ ಚಲನವಲನ ಗುರುತಿಸಲು 30 ಆಧುನಿಕ ಥರ್ಮಲ್ ಡ್ರೋಣ್ ಕ್ಯಾಮೆರಾ ಬಳಸಲಾಗಿತ್ತು. ಹಲವು ದಿನಗಳಿಂದಲೂ ಕ್ಯಾಮೆರಾ ಮುಖೇನ ಚಿರತೆ ಓಡಾಟವನ್ನು ಅರಣ್ಯ ಇಲಾಖೆಯು ಗಮನಿಸಿತ್ತು .
ಮಲ್ಲಪ್ಪನ ಬೆಟ್ಟದಲ್ಲಿ ಅವಳಿ ಚಿರತೆಗಳು ಆಗಾಗ ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸುತಿದ್ದವು. ಇದೀಗ ಒಂದು ಚಿರತೆ ಸಿಕ್ಕಿರುವುದರಿಂದ ಸುತ್ತಮುತ್ತಲ ಗ್ರಾಮದ ಜನರು ಸ್ವಲ್ಪಮಟ್ಟಿಗೆ ನಿರುಮ್ಮಳರಾಗಿದ್ದಾರೆ. ಸೆರೆ ಸಿಕ್ಕಿರುವ ಚಿರತೆ ನೋಡಲು ಸುತ್ತಮುತ್ತಲ ಗ್ರಾಮಸ್ಥರು ಆಗಮಿಸಿದ್ದರಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸಾಗಿಸಲು ಪ್ರಯಾಸಪಡಬೇಕಾಯಿತು.

ಸ್ಥಳಕ್ಕೆ ಭೇಟಿ ನೀಡಿದ ಶಾಸಕರು:

ಚಿರತೆ ಸೆರೆ ಸಿಕ್ಕ ಮಾಹಿತಿ ಸಿಕ್ಕಿದ ಕೂಡಲೇ ಶಾಸಕ ಎಂ.ಅಶ್ವಿನ್ ಕುಮಾರ್ ಸ್ಥಳಕ್ಕೆ ಧಾವಿಸಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ತಾಲೂಕಿನ ಹಲೆವೆಡೆ ಚಿರತೆ ಹಾವಳಿ ಹೆಚ್ಚಾಗಿದ್ದು, ಶೀಘ್ರ ಚಿರತೆಗಳನ್ನು ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳದಲ್ಲಿ ಸಿಎಫ್ ಮಾಲತಿ ಪ್ರಿಯ, ಡಿಸಿಎಎಫ್ ಕಮಲ ಕರಿಕಾಳನ್, ಎಸಿಎಫ್ ಲಕ್ಷೀಕಾಂತ್, ಸಮಾಜ ವಲಯ ಅರಣ್ಯಾಧಿಕಾರಿ ರಾಜೇಶ್, ಅರಣ್ಯ ಅಧಿಕಾರಿ ಯಮುನಾ ,ಮಂಜುನಾಥ್,ಉಮೇಶ್, ಸರ್ಕಲ್ ಇನ್ ಸ್ಪೆಕ್ಟರ್ ಲೋಲಾಕ್ಷಿ ಮತ್ತಿತರರು ಹಾಜರಿದ್ದರು .

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago