ಮೈಸೂರು: ರಾಜ್ಯದ ಹಲವು ಪೊಲೀಸ್ ಇನ್ ಸ್ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಡಿ.ಯೋಗೇಶ್ ಅವರನ್ನು ನಗರದ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಗೆ, ಸಿದ್ದಾರ್ಥನಗರ ಠಾಣೆಯಲ್ಲಿದ್ದ ಎಂ.ಆರ್. ನಟರಾಜ್ ಅವರನ್ನು ರಾಜ್ಯ ಗುಪ್ತವಾರ್ತೆಗೆ, ಮೈಸೂರು ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿದ್ದ ಶಬ್ಬೀರ್ ಹುಸೇನ್ ಅವರನ್ನು ಉದಯಗಿರಿ ಪೊಲೀಸ್ ಠಾಣೆಗೆ, ಉದಯಗಿರಿ ಪೊಲೀಸ್ ಠಾಣೆಯಲ್ಲಿದ್ದ ಪಿ.ಕೆ.ರಾಜು ಅವರನ್ನು ಸೆನ್ ಠಾಣೆಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಕಾರ್ಗಲ್ ವೃತ್ತದಲ್ಲಿದ್ದ ಕೆ.ವಿ. ಕೃಷ್ಣಪ್ಪ ಅವರನ್ನು ತಿ.ನರಸೀಪುರ ಪೊಲೀಸ್ ಠಾಣೆಗೆ, ತಿ.ನರಸೀಪುರ ಠಾಣೆಯಲ್ಲಿದ್ದ ಎನ್.ಜಿ. ಕೃಷ್ಣಪ್ಪ ಅವರನ್ನು ಕೊಡಗಿನ ಸೆನ್ ಠಾಣೆಗೆ, ಕೆ.ಜಿ.ಎಫ್.ನ ಕಾಮಸಮುದ್ರ ವೃತ್ತದಲ್ಲಿದ್ದ ಜೆ.ಎನ್.ಆನಂದ್ ಕುಮಾರ್ ಅವರನ್ನು ತಲಕಾಡು ಪೊಲೀಸ್ ಠಾಣೆಗೆ, ತಲಕಾಡು ಠಾಣೆಯಲ್ಲಿದ್ದ ಎಲ್. ಅರುಣ್ ಅವರನ್ನು ನಗರದ ಕುವೆಂಪುನಗರ ಪೊಲೀಸ್ ಠಾಣೆಗೆ, ಕುವೆಂಪುನಗರ ಠಾಣೆಯಲ್ಲಿದ್ದ ಕೆ. ಷಣ್ಮುಗ ವರ್ಮ ಅವರನ್ನು ಪಿಟಿಎಸ್ ಠಾಣೆಗೆ, ಪಿಟಿಎಸ್ ಠಾಣೆಯಲ್ಲಿದ್ದ ಎಸ್.ನಾಗೇಶ್ ಅವರನ್ನು ಮಂಡಿ ಪೊಲೀಸ್ ಠಾಣೆಗೆ, ಮಂಡಿ ಠಾಣೆಯಲ್ಲಿದ್ದ ಕೆ.ಆರ್. ರಘು ಅವರನ್ನು ಮಂಡ್ಯದ ಡಿ.ಎಸ್.ಬಿ ಗೆ ನಿಯೋಜಿಸಲಾಗಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ಗ್ರಾಮಾಂತರ ವೃತ್ತದಲ್ಲಿದ್ದ ಟಿ.ಬಿ.ಶಿವಕುಮಾರ್ ಅವರನ್ನು ದೇವರಾಜ ಪೊಲೀಸ್ ಠಾಣೆಗೆ, ದೇವರಾಜ ಪೊಲೀಸ್ ಠಾಣೆಯಲ್ಲಿದ್ದ ಆರ್. ದಿವಾಕರ್ ಅವರನ್ನು ಮೇಟಗಳ್ಳಿ ಪೊಲೀಸ್ ಠಾಣೆಗೆ, ಸರಗೂರು ವೃತ್ತದಲ್ಲಿದ್ದ ಎನ್.ಆನಂದ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಗೆ, ಪಿರಿಯಾಪಟ್ಟಣ ಠಾಣೆಯಲ್ಲಿದ್ದ ಪಿ.ಜಗದೀಶ್ ಅವರನ್ನು ಕೆ.ಆರ್. ಪೇಟೆ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…