ಜಿಲ್ಲೆಗಳು

ರಾಜ್ಯದ ಹಲವು ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗ

ಮೈಸೂರು: ರಾಜ್ಯದ ಹಲವು ಪೊಲೀಸ್ ಇನ್ ಸ್ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಡಿ.ಯೋಗೇಶ್ ಅವರನ್ನು ನಗರದ ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಗೆ, ಸಿದ್ದಾರ್ಥನಗರ ಠಾಣೆಯಲ್ಲಿದ್ದ ಎಂ.ಆರ್. ನಟರಾಜ್ ಅವರನ್ನು ರಾಜ್ಯ ಗುಪ್ತವಾರ್ತೆಗೆ, ಮೈಸೂರು ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿದ್ದ ಶಬ್ಬೀರ್ ಹುಸೇನ್ ಅವರನ್ನು ಉದಯಗಿರಿ ಪೊಲೀಸ್ ಠಾಣೆಗೆ, ಉದಯಗಿರಿ ಪೊಲೀಸ್ ಠಾಣೆಯಲ್ಲಿದ್ದ ಪಿ.ಕೆ.ರಾಜು ಅವರನ್ನು ಸೆನ್ ಠಾಣೆಗೆ ವರ್ಗಾಯಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಕಾರ್ಗಲ್ ವೃತ್ತದಲ್ಲಿದ್ದ ಕೆ.ವಿ. ಕೃಷ್ಣಪ್ಪ ಅವರನ್ನು ತಿ.ನರಸೀಪುರ ಪೊಲೀಸ್ ಠಾಣೆಗೆ, ತಿ.ನರಸೀಪುರ ಠಾಣೆಯಲ್ಲಿದ್ದ ಎನ್.ಜಿ. ಕೃಷ್ಣಪ್ಪ ಅವರನ್ನು ಕೊಡಗಿನ ಸೆನ್ ಠಾಣೆಗೆ, ಕೆ.ಜಿ.ಎಫ್.ನ ಕಾಮಸಮುದ್ರ ವೃತ್ತದಲ್ಲಿದ್ದ ಜೆ.ಎನ್.ಆನಂದ್ ಕುಮಾರ್ ಅವರನ್ನು ತಲಕಾಡು ಪೊಲೀಸ್ ಠಾಣೆಗೆ, ತಲಕಾಡು ಠಾಣೆಯಲ್ಲಿದ್ದ ಎಲ್. ಅರುಣ್ ಅವರನ್ನು ನಗರದ ಕುವೆಂಪುನಗರ ಪೊಲೀಸ್ ಠಾಣೆಗೆ, ಕುವೆಂಪುನಗರ ಠಾಣೆಯಲ್ಲಿದ್ದ ಕೆ. ಷಣ್ಮುಗ ವರ್ಮ ಅವರನ್ನು ಪಿಟಿಎಸ್ ಠಾಣೆಗೆ, ಪಿಟಿಎಸ್ ಠಾಣೆಯಲ್ಲಿದ್ದ ಎಸ್.ನಾಗೇಶ್ ಅವರನ್ನು ಮಂಡಿ ಪೊಲೀಸ್ ಠಾಣೆಗೆ, ಮಂಡಿ ಠಾಣೆಯಲ್ಲಿದ್ದ ಕೆ.ಆರ್. ರಘು ಅವರನ್ನು ಮಂಡ್ಯದ ಡಿ.ಎಸ್.ಬಿ ಗೆ ನಿಯೋಜಿಸಲಾಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ಗ್ರಾಮಾಂತರ ವೃತ್ತದಲ್ಲಿದ್ದ ಟಿ.ಬಿ.ಶಿವಕುಮಾರ್ ಅವರನ್ನು ದೇವರಾಜ ಪೊಲೀಸ್ ಠಾಣೆಗೆ, ದೇವರಾಜ ಪೊಲೀಸ್ ಠಾಣೆಯಲ್ಲಿದ್ದ ಆರ್. ದಿವಾಕರ್ ಅವರನ್ನು ಮೇಟಗಳ್ಳಿ ಪೊಲೀಸ್ ಠಾಣೆಗೆ, ಸರಗೂರು ವೃತ್ತದಲ್ಲಿದ್ದ ಎನ್.ಆನಂದ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಗೆ, ಪಿರಿಯಾಪಟ್ಟಣ ಠಾಣೆಯಲ್ಲಿದ್ದ ಪಿ.ಜಗದೀಶ್ ಅವರನ್ನು ಕೆ.ಆರ್. ಪೇಟೆ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

andolana

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

18 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

18 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

18 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

18 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

18 hours ago