ಮೈಸೂರು: ಸಿದ್ದರಾಮಯ್ಯ ಕೃತಿ ಬಿಡುಗಡೆ ಸಮಾರಂಭದಲ್ಲಿ ಬ್ರಾಹ್ಮಣಿಕೆ ಹಾಗೂ ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದ ಹಿರಿಯ ಸಮಾಜವಾದಿ ಪ.ಮಲ್ಲೇಶ್ ವಿರುದ್ಧ ವಿವಿಧ ಬ್ರಾಹ್ಮಣ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದವು.
ಸೋಮವಾರ ನಗರದ ಗನ್ ಹೌಸ್ ಬಳಿಕ ಶಂಕರ ಮಠದ ಆವರಣದಲ್ಲಿ ಜಮಾವಣೆಗೊಂಡ ವಿವಿಧ ಸಂಘಟನೆಗಳ ನೂರಾರು ಬ್ರಾಹ್ಮಣ ಕಾರ್ಯಕರ್ತರು ಹಾಗೂ ಮುಖಂಡರು ಪ.ಮಲ್ಲೇಶ್ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವೇದ, ಉಪನಿಷತ್ತುಗಳನ್ನು ಸಮಾಜಕ್ಕೆ ಉಡುಗೆಯಾಗಿ ನೀಡಿದ್ದು ನಮ್ಮ ಸಮಾಜ ಎಂಬುದನ್ನು ಯಾರೂ ಮರೆಯಬಾರದು. ದೇಶದ ಬಗ್ಗೆ ಹಾಗೂ ದೇಶವನ್ನು ಪ್ರೀತಿಸುವವರ ಬಗ್ಗೆ ನಮ್ಮ ಸಮುದಾಯ ಯಾವಾಗಲೂ ಗೌರವದಿಂದ ಕಾಣುತ್ತದೆ. ನಾವು ಯಾವಾಗಲು ಮತ್ತೊಂದು ಸಮುದಾಯದ ವಿರುದ್ಧ ಮಾತನಾಡಿದ ಉದಾಹರಣೆ ಇಲ್ಲ. ಇದನ್ನು ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
ನಾವು ಸುಮ್ಮನಿದ್ದೇವೆ ಎಂದರೆ ಅದು ನಮ್ಮ ಅಸಮರ್ಥತೆ ಎಂದು ಯಾರೂ ಭಾವಿಸಬಾರದು. ಯಾರೋ ಒಬ್ಬರು ತಲೆಕೆಟ್ಟವರಂತೆ ಮಾತನಾಡಿದರೆ ನಾವು ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ. ಸಮಾಜದ ಸ್ವಾಸ್ಥ್ಯ ನಮ್ಮಿಂದ ಹಾಳಾಗಬರದು ಎಂದು ಸುಮ್ಮನಿರುತ್ತೇವೆ. ಅದು ಅತಿಯಾದಾಗ ಹೋರಾಟ ಅನಿವಾರ್ಯ ಎಂದರು.
ನಗರಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್, ಮುಖಂಡರಾದ ರವಿಶಾಸ್ತ್ರಿ, ವಿಕ್ರಂ ಅಯ್ಯಂಗಾರ್, ಭಾನುಪ್ರಕಾಶ್ ಶರ್ಮ, ವಿಕಾಸ್ ಶಾಸ್ತ್ರಿ, ಚಂದ್ರಶೇಖರ್, ಇಳೈ ಆಳ್ವಾರ್ ಸ್ವಾಮೀಜಿ, ಮಂಗಳಸೂತ್ರ ಶ್ರೀನಿವಾಸ್ ಮುಂತಾದವರು ಹಾಜರಿದ್ದರು.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…