ಜಿಲ್ಲೆಗಳು

ಪ.ಮಲ್ಲೇಶ್ ವಿರುದ್ಧ ಬ್ರಾಹ್ಮಣ ಸಂಘಟನೆಗಳ ಬೃಹತ್ ಪ್ರತಿಭಟನೆ

ಮೈಸೂರು: ಸಿದ್ದರಾಮಯ್ಯ ಕೃತಿ ಬಿಡುಗಡೆ ಸಮಾರಂಭದಲ್ಲಿ ಬ್ರಾಹ್ಮಣಿಕೆ ಹಾಗೂ ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದ ಹಿರಿಯ ಸಮಾಜವಾದಿ ಪ.ಮಲ್ಲೇಶ್ ವಿರುದ್ಧ ವಿವಿಧ ಬ್ರಾಹ್ಮಣ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಸೋಮವಾರ ನಗರದ ಗನ್ ಹೌಸ್ ಬಳಿಕ ಶಂಕರ ಮಠದ ಆವರಣದಲ್ಲಿ ಜಮಾವಣೆಗೊಂಡ ವಿವಿಧ ಸಂಘಟನೆಗಳ ನೂರಾರು ಬ್ರಾಹ್ಮಣ ಕಾರ್ಯಕರ್ತರು ಹಾಗೂ ಮುಖಂಡರು ಪ.ಮಲ್ಲೇಶ್ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಶಾಸಕ ಎಸ್.ಎ.ರಾಮದಾಸ್, ಬ್ರಾಹ್ಮಣ ಸಮುದಾಯ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಮೂಲಕ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತದೆ. ಇದನ್ನು ಅರಿಯದ ಕೆಲವರು ಸಮುದಾಯವನ್ನು ಟೀಕಿಸುವುದು ಸರಿಯಲ್ಲ ಎಂದರು.

ವೇದ, ಉಪನಿಷತ್ತುಗಳನ್ನು ಸಮಾಜಕ್ಕೆ ಉಡುಗೆಯಾಗಿ ನೀಡಿದ್ದು ನಮ್ಮ ಸಮಾಜ ಎಂಬುದನ್ನು ಯಾರೂ ಮರೆಯಬಾರದು. ದೇಶದ ಬಗ್ಗೆ ಹಾಗೂ ದೇಶವನ್ನು ಪ್ರೀತಿಸುವವರ ಬಗ್ಗೆ ನಮ್ಮ ಸಮುದಾಯ ಯಾವಾಗಲೂ ಗೌರವದಿಂದ ಕಾಣುತ್ತದೆ. ನಾವು ಯಾವಾಗಲು ಮತ್ತೊಂದು ಸಮುದಾಯದ ವಿರುದ್ಧ ಮಾತನಾಡಿದ ಉದಾಹರಣೆ ಇಲ್ಲ. ಇದನ್ನು ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ನಾವು ಸುಮ್ಮನಿದ್ದೇವೆ ಎಂದರೆ ಅದು ನಮ್ಮ ಅಸಮರ್ಥತೆ ಎಂದು ಯಾರೂ ಭಾವಿಸಬಾರದು. ಯಾರೋ ಒಬ್ಬರು ತಲೆಕೆಟ್ಟವರಂತೆ ಮಾತನಾಡಿದರೆ ನಾವು ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ. ಸಮಾಜದ ಸ್ವಾಸ್ಥ್ಯ ನಮ್ಮಿಂದ ಹಾಳಾಗಬರದು ಎಂದು ಸುಮ್ಮನಿರುತ್ತೇವೆ. ಅದು ಅತಿಯಾದಾಗ ಹೋರಾಟ ಅನಿವಾರ್ಯ ಎಂದರು.

ಶಂಕರಮಠದ ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ಪುತ್ಥಳಿ, ಸಂಸ್ಕೃತ ಪಾಠಶಾಲೆ, ರಾಮಸ್ವಾಮಿ ವೃತ್ತ, ಮೂಡಾ ವೃತ್ತದ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಪ.ಮಲ್ಲೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಮನವಿ ಪತ್ರ ಸಲ್ಲಿಸಲಾಯಿತು.

ನಗರಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್, ಮುಖಂಡರಾದ ರವಿಶಾಸ್ತ್ರಿ, ವಿಕ್ರಂ ಅಯ್ಯಂಗಾರ್, ಭಾನುಪ್ರಕಾಶ್ ಶರ್ಮ, ವಿಕಾಸ್ ಶಾಸ್ತ್ರಿ, ಚಂದ್ರಶೇಖರ್, ಇಳೈ ಆಳ್ವಾರ್ ಸ್ವಾಮೀಜಿ, ಮಂಗಳಸೂತ್ರ ಶ್ರೀನಿವಾಸ್ ಮುಂತಾದವರು ಹಾಜರಿದ್ದರು.

andolana

Recent Posts

ಹನೂರು: ನಾಳೆ ಚಂದ್ರಗಹಣವಿದ್ದರೂ ಭಕ್ತರಿಗೆ ಮಹದೇಶ್ವರನ ದರ್ಶನಕ್ಕಿಲ್ಲ ತೊಂದರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ…

7 mins ago

ಹುದ್ದೆಗಳ ಭರ್ತಿ ನಡೆಯಲಿ; ಯುವಶಕ್ತಿಯನ್ನು ಕಡೆಗಣಿಸದಿರಲಿ

ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, …

27 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಬಿಜೆಪಿ-ಜಾ.ದಳ ಪಾಳೆಯಗಳಿಗೆ  ಹರ್ಷ ತಂದಿರುವ ರಾಜ್ಯ ರಾಜಕಾರಣ

ಜಾ.ದಳ ಸಮಾವೇಶ, ಯಡಿಯೂರೋತ್ಸವದ ಮೂಲಕ ಮತದಾರರ ಗಮನ ಸೆಳೆಯಲು ಯತ್ನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಿಜೆಪಿ-ಜಾ.ದಳ ಪಾಳೆಯಗಳಿಗೆ ಹರ್ಷ ತಂದಿರುವುದು…

40 mins ago

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

4 hours ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

4 hours ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

4 hours ago