ಜಿಲ್ಲೆಗಳು

ಪ.ಮಲ್ಲೇಶ್ ವಿರುದ್ಧ ಬ್ರಾಹ್ಮಣ ಸಂಘಟನೆಗಳ ಬೃಹತ್ ಪ್ರತಿಭಟನೆ

ಮೈಸೂರು: ಸಿದ್ದರಾಮಯ್ಯ ಕೃತಿ ಬಿಡುಗಡೆ ಸಮಾರಂಭದಲ್ಲಿ ಬ್ರಾಹ್ಮಣಿಕೆ ಹಾಗೂ ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದ ಹಿರಿಯ ಸಮಾಜವಾದಿ ಪ.ಮಲ್ಲೇಶ್ ವಿರುದ್ಧ ವಿವಿಧ ಬ್ರಾಹ್ಮಣ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಸೋಮವಾರ ನಗರದ ಗನ್ ಹೌಸ್ ಬಳಿಕ ಶಂಕರ ಮಠದ ಆವರಣದಲ್ಲಿ ಜಮಾವಣೆಗೊಂಡ ವಿವಿಧ ಸಂಘಟನೆಗಳ ನೂರಾರು ಬ್ರಾಹ್ಮಣ ಕಾರ್ಯಕರ್ತರು ಹಾಗೂ ಮುಖಂಡರು ಪ.ಮಲ್ಲೇಶ್ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಶಾಸಕ ಎಸ್.ಎ.ರಾಮದಾಸ್, ಬ್ರಾಹ್ಮಣ ಸಮುದಾಯ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಮೂಲಕ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತದೆ. ಇದನ್ನು ಅರಿಯದ ಕೆಲವರು ಸಮುದಾಯವನ್ನು ಟೀಕಿಸುವುದು ಸರಿಯಲ್ಲ ಎಂದರು.

ವೇದ, ಉಪನಿಷತ್ತುಗಳನ್ನು ಸಮಾಜಕ್ಕೆ ಉಡುಗೆಯಾಗಿ ನೀಡಿದ್ದು ನಮ್ಮ ಸಮಾಜ ಎಂಬುದನ್ನು ಯಾರೂ ಮರೆಯಬಾರದು. ದೇಶದ ಬಗ್ಗೆ ಹಾಗೂ ದೇಶವನ್ನು ಪ್ರೀತಿಸುವವರ ಬಗ್ಗೆ ನಮ್ಮ ಸಮುದಾಯ ಯಾವಾಗಲೂ ಗೌರವದಿಂದ ಕಾಣುತ್ತದೆ. ನಾವು ಯಾವಾಗಲು ಮತ್ತೊಂದು ಸಮುದಾಯದ ವಿರುದ್ಧ ಮಾತನಾಡಿದ ಉದಾಹರಣೆ ಇಲ್ಲ. ಇದನ್ನು ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ನಾವು ಸುಮ್ಮನಿದ್ದೇವೆ ಎಂದರೆ ಅದು ನಮ್ಮ ಅಸಮರ್ಥತೆ ಎಂದು ಯಾರೂ ಭಾವಿಸಬಾರದು. ಯಾರೋ ಒಬ್ಬರು ತಲೆಕೆಟ್ಟವರಂತೆ ಮಾತನಾಡಿದರೆ ನಾವು ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ. ಸಮಾಜದ ಸ್ವಾಸ್ಥ್ಯ ನಮ್ಮಿಂದ ಹಾಳಾಗಬರದು ಎಂದು ಸುಮ್ಮನಿರುತ್ತೇವೆ. ಅದು ಅತಿಯಾದಾಗ ಹೋರಾಟ ಅನಿವಾರ್ಯ ಎಂದರು.

ಶಂಕರಮಠದ ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ಪುತ್ಥಳಿ, ಸಂಸ್ಕೃತ ಪಾಠಶಾಲೆ, ರಾಮಸ್ವಾಮಿ ವೃತ್ತ, ಮೂಡಾ ವೃತ್ತದ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಪ.ಮಲ್ಲೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಮನವಿ ಪತ್ರ ಸಲ್ಲಿಸಲಾಯಿತು.

ನಗರಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್, ಮುಖಂಡರಾದ ರವಿಶಾಸ್ತ್ರಿ, ವಿಕ್ರಂ ಅಯ್ಯಂಗಾರ್, ಭಾನುಪ್ರಕಾಶ್ ಶರ್ಮ, ವಿಕಾಸ್ ಶಾಸ್ತ್ರಿ, ಚಂದ್ರಶೇಖರ್, ಇಳೈ ಆಳ್ವಾರ್ ಸ್ವಾಮೀಜಿ, ಮಂಗಳಸೂತ್ರ ಶ್ರೀನಿವಾಸ್ ಮುಂತಾದವರು ಹಾಜರಿದ್ದರು.

andolana

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

2 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

2 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

2 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

2 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

14 hours ago