ಜಿಲ್ಲೆಗಳು

ಪ.ಮಲ್ಲೇಶ್ ವಿರುದ್ಧ ಬ್ರಾಹ್ಮಣ ಸಂಘಟನೆಗಳ ಬೃಹತ್ ಪ್ರತಿಭಟನೆ

ಮೈಸೂರು: ಸಿದ್ದರಾಮಯ್ಯ ಕೃತಿ ಬಿಡುಗಡೆ ಸಮಾರಂಭದಲ್ಲಿ ಬ್ರಾಹ್ಮಣಿಕೆ ಹಾಗೂ ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದ ಹಿರಿಯ ಸಮಾಜವಾದಿ ಪ.ಮಲ್ಲೇಶ್ ವಿರುದ್ಧ ವಿವಿಧ ಬ್ರಾಹ್ಮಣ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಸೋಮವಾರ ನಗರದ ಗನ್ ಹೌಸ್ ಬಳಿಕ ಶಂಕರ ಮಠದ ಆವರಣದಲ್ಲಿ ಜಮಾವಣೆಗೊಂಡ ವಿವಿಧ ಸಂಘಟನೆಗಳ ನೂರಾರು ಬ್ರಾಹ್ಮಣ ಕಾರ್ಯಕರ್ತರು ಹಾಗೂ ಮುಖಂಡರು ಪ.ಮಲ್ಲೇಶ್ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಶಾಸಕ ಎಸ್.ಎ.ರಾಮದಾಸ್, ಬ್ರಾಹ್ಮಣ ಸಮುದಾಯ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಮೂಲಕ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತದೆ. ಇದನ್ನು ಅರಿಯದ ಕೆಲವರು ಸಮುದಾಯವನ್ನು ಟೀಕಿಸುವುದು ಸರಿಯಲ್ಲ ಎಂದರು.

ವೇದ, ಉಪನಿಷತ್ತುಗಳನ್ನು ಸಮಾಜಕ್ಕೆ ಉಡುಗೆಯಾಗಿ ನೀಡಿದ್ದು ನಮ್ಮ ಸಮಾಜ ಎಂಬುದನ್ನು ಯಾರೂ ಮರೆಯಬಾರದು. ದೇಶದ ಬಗ್ಗೆ ಹಾಗೂ ದೇಶವನ್ನು ಪ್ರೀತಿಸುವವರ ಬಗ್ಗೆ ನಮ್ಮ ಸಮುದಾಯ ಯಾವಾಗಲೂ ಗೌರವದಿಂದ ಕಾಣುತ್ತದೆ. ನಾವು ಯಾವಾಗಲು ಮತ್ತೊಂದು ಸಮುದಾಯದ ವಿರುದ್ಧ ಮಾತನಾಡಿದ ಉದಾಹರಣೆ ಇಲ್ಲ. ಇದನ್ನು ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ನಾವು ಸುಮ್ಮನಿದ್ದೇವೆ ಎಂದರೆ ಅದು ನಮ್ಮ ಅಸಮರ್ಥತೆ ಎಂದು ಯಾರೂ ಭಾವಿಸಬಾರದು. ಯಾರೋ ಒಬ್ಬರು ತಲೆಕೆಟ್ಟವರಂತೆ ಮಾತನಾಡಿದರೆ ನಾವು ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ. ಸಮಾಜದ ಸ್ವಾಸ್ಥ್ಯ ನಮ್ಮಿಂದ ಹಾಳಾಗಬರದು ಎಂದು ಸುಮ್ಮನಿರುತ್ತೇವೆ. ಅದು ಅತಿಯಾದಾಗ ಹೋರಾಟ ಅನಿವಾರ್ಯ ಎಂದರು.

ಶಂಕರಮಠದ ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ಪುತ್ಥಳಿ, ಸಂಸ್ಕೃತ ಪಾಠಶಾಲೆ, ರಾಮಸ್ವಾಮಿ ವೃತ್ತ, ಮೂಡಾ ವೃತ್ತದ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಪ.ಮಲ್ಲೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಮನವಿ ಪತ್ರ ಸಲ್ಲಿಸಲಾಯಿತು.

ನಗರಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್, ಮುಖಂಡರಾದ ರವಿಶಾಸ್ತ್ರಿ, ವಿಕ್ರಂ ಅಯ್ಯಂಗಾರ್, ಭಾನುಪ್ರಕಾಶ್ ಶರ್ಮ, ವಿಕಾಸ್ ಶಾಸ್ತ್ರಿ, ಚಂದ್ರಶೇಖರ್, ಇಳೈ ಆಳ್ವಾರ್ ಸ್ವಾಮೀಜಿ, ಮಂಗಳಸೂತ್ರ ಶ್ರೀನಿವಾಸ್ ಮುಂತಾದವರು ಹಾಜರಿದ್ದರು.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

24 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago