ಜಿಲ್ಲೆಗಳು

ವೈದ್ಯಕೀಯ ಕ್ಷೇತ್ರದ ಸಹಾಯವಿಲ್ಲದೆ ಕ್ಲಿಷ್ಟಕರ ಪ್ರಕರಣ ಬಗೆಹರಿಯುವುದಿಲ್ಲ: ಉಪ ಲೋಕಾಯುಕ್ತ ಫಣೀಂದ್ರ

ಮೈಸೂರು: ನ್ಯಾಯಾಂಗಕ್ಕೆ ಸಂಬಂದಿಸಿದ ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ವೈದ್ಯಕೀಯ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. ವೈದ್ಯರ ನೆರವಿಲ್ಲದೆ ಕೆಲ ಪ್ರಕರಣಗಳು ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಉಪ ಲೋಕಾಯುಕ್ತ ಹಾಗೂ ನ್ಯಾಯಾಧೀಶರಾದ ಕೆ.ಎನ್. ಫಣೀಂದ್ರ  ಅಭಿಪ್ರಾಯಪಟ್ಟರು. ಫಣೀಂದ್ರ


ಶುಕ್ರವಾರ ನಗರದ ಬನ್ನಿಮಂಟಪದ ಬಳಿ ಇರುವ ಜೆಎಸ್‌ಎಸ್ ಔಷಧ ವಿಜ್ಞಾನ ಕಾಲೇಜಿನ ಫೋರೆನ್ಸಿಕ್ ವಿಭಾಗ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ‘ಕಮಲ್ಸಕಾನ್-೨೦೨೨’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಾಂಗ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಸಾಕಷ್ಟು ಸಂಬಂದವಿದೆ. ಕೊಲೆಯಂತಹ ಪ್ರಕರಣಗಳಲ್ಲಿ ಫೊರೆನ್ಸಿಕ್ ವಿಭಾಗದ ಪಾತ್ರ ಹೆಚ್ಚಿದೆ. ವಿಚಾರಣೆ ವೇಳೆ ವೈದ್ಯರು ನೀಡುವ ಹೇಳಿಕೆ ಹಾಗೂ ವರದಿಗಳು ಬಹಳ ಮಹತ್ವವನ್ನು ಪಡೆದುಕೊಳ್ಳುತ್ತವೆ ಎಂದು ಹೇಳಿದರು.
ವೈದ್ಯರಾಗುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನೀವು ಕಲಿತದ್ದನ್ನು ಸಮಾಜ ಸೇವೆಯಂತಹ ಉದ್ದೇಶಕ್ಕೆ ಬಳಸಿಕೊಂಡಲ್ಲಿ ನಿಮ್ಮ ವಿದ್ಯೆ ಸಾರ್ಥಕವಾಗುತ್ತದೆ. ದೇಶ ನಮಗೇನು ಮಾಡಿದೆ ಎನ್ನುವುದ ಬದಲು ದೇಶಕ್ಕೆ ನವು ಏನು ಕೊಡುಗೆ ನೀಡಿದ್ದೇವೆ ಎಂಬುದನ್ನು ಆಲೋಚಿಸಿದಲ್ಲಿ ಆತ ಉತ್ತಮ ಪ್ರಜೆ ಎನಿಸಿಕೊಳ್ಳುತ್ತಾನೆ. ಈ ನಿಟ್ಟಿನಲ್ಲಿ ನಿಮ್ಮ ವಿದ್ಯೆಯನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿ ಎಂದು ಕಿವಿಮಾತು ಹೇಳಿದರು.
ಇಂದು ಭ್ರಷ್ಟಾಚಾರ ಎಂಬುದು ಎಲ್ಲ ಕ್ಷೇತ್ರಗಳಲ್ಲಿ ಕಾಣುತ್ತಿದೆ. ಅದು ವೈದ್ಯಕೀಯ ಕ್ಷೇತ್ರವನ್ನೂ ಬಿಟ್ಟಿಲ್ಲ ಎಂಬುದು ನೋವಿನ ಸಂಗತಿ. ನಾನು ನ್ಯಾಯಾಧೀಶನಾಗಿ ಕೆಲ ಪ್ರಕರಣಗಳನ್ನು ಗಮನಿಸಿದಂತೆ ಕೆಲ ವೈದ್ಯರು ನಕಲಿ ಪ್ರಮಾಣ ಪತ್ರ ನೀಡುವುದನ್ನು ಕಂಡಿದ್ದೇನೆ.
ಅಪಘಾತದ ಸಂದರ್ಭದಲ್ಲಿ ಏನೂ ಆಗದವನಿಗೆ ನಾಲ್ಕಾರು ಕಡೆ ಮೂಳೆ ಮುರಿದಿದೆ ಎಂದು ಪ್ರಮಾಣಪತ್ರ ನೀಡಿರುವ ಸಾಕಷ್ಟು ಪ್ರಕರಣಗಳನ್ನು ಕಂಡಿದ್ದೇನೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಸಮಾಜವನ್ನು ಸರಿದಾರಿಯಲ್ಲಿ ಕೊಂಡೊಯ್ಯವ ಜವಾಬ್ದಾರಿ ಎಲ್ಲರ ಮೇಲಿದೆ ಎಂಬುದನ್ನು ಯುವ ಪೀಳಿಗೆ ಅರಿಯಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನ ಸಂಸ್ಥೆಯ ಉಪ ಕುಲಪತಿ ಡಾ.ಸುರೀಂದ್ರಸಿಂಗ್, ಕುಲಸಚಿವ ಡಾ.ಬಿ.ಮಂಜುನಾಥ್, ಪ್ರಾಂಶುಪಾಲ ಡಾ.ಬಸವನಗೌಡಪ್ಪ, ಡಾ.ಅರುಣ್, ಡಾ.ಚಂದ್ರಕುಮಾರ್ ಮುಂತಾದವರು ಹಾಜರಿದ್ದರು.

andolanait

Recent Posts

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

26 mins ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…

44 mins ago

ಬಜೆಟ್‌ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರ ಪ್ರಮುಖ ಅಂಶಗಳಿವು.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…

60 mins ago

ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…

1 hour ago

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

1 hour ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…

2 hours ago