ಮೈಸೂರು: ನ್ಯಾಯಾಂಗಕ್ಕೆ ಸಂಬಂದಿಸಿದ ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ವೈದ್ಯಕೀಯ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. ವೈದ್ಯರ ನೆರವಿಲ್ಲದೆ ಕೆಲ ಪ್ರಕರಣಗಳು ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಉಪ ಲೋಕಾಯುಕ್ತ ಹಾಗೂ ನ್ಯಾಯಾಧೀಶರಾದ ಕೆ.ಎನ್. ಫಣೀಂದ್ರ ಅಭಿಪ್ರಾಯಪಟ್ಟರು. ಫಣೀಂದ್ರ
ಶುಕ್ರವಾರ ನಗರದ ಬನ್ನಿಮಂಟಪದ ಬಳಿ ಇರುವ ಜೆಎಸ್ಎಸ್ ಔಷಧ ವಿಜ್ಞಾನ ಕಾಲೇಜಿನ ಫೋರೆನ್ಸಿಕ್ ವಿಭಾಗ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ‘ಕಮಲ್ಸಕಾನ್-೨೦೨೨’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಾಂಗ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಸಾಕಷ್ಟು ಸಂಬಂದವಿದೆ. ಕೊಲೆಯಂತಹ ಪ್ರಕರಣಗಳಲ್ಲಿ ಫೊರೆನ್ಸಿಕ್ ವಿಭಾಗದ ಪಾತ್ರ ಹೆಚ್ಚಿದೆ. ವಿಚಾರಣೆ ವೇಳೆ ವೈದ್ಯರು ನೀಡುವ ಹೇಳಿಕೆ ಹಾಗೂ ವರದಿಗಳು ಬಹಳ ಮಹತ್ವವನ್ನು ಪಡೆದುಕೊಳ್ಳುತ್ತವೆ ಎಂದು ಹೇಳಿದರು.
ವೈದ್ಯರಾಗುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನೀವು ಕಲಿತದ್ದನ್ನು ಸಮಾಜ ಸೇವೆಯಂತಹ ಉದ್ದೇಶಕ್ಕೆ ಬಳಸಿಕೊಂಡಲ್ಲಿ ನಿಮ್ಮ ವಿದ್ಯೆ ಸಾರ್ಥಕವಾಗುತ್ತದೆ. ದೇಶ ನಮಗೇನು ಮಾಡಿದೆ ಎನ್ನುವುದ ಬದಲು ದೇಶಕ್ಕೆ ನವು ಏನು ಕೊಡುಗೆ ನೀಡಿದ್ದೇವೆ ಎಂಬುದನ್ನು ಆಲೋಚಿಸಿದಲ್ಲಿ ಆತ ಉತ್ತಮ ಪ್ರಜೆ ಎನಿಸಿಕೊಳ್ಳುತ್ತಾನೆ. ಈ ನಿಟ್ಟಿನಲ್ಲಿ ನಿಮ್ಮ ವಿದ್ಯೆಯನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿ ಎಂದು ಕಿವಿಮಾತು ಹೇಳಿದರು.
ಇಂದು ಭ್ರಷ್ಟಾಚಾರ ಎಂಬುದು ಎಲ್ಲ ಕ್ಷೇತ್ರಗಳಲ್ಲಿ ಕಾಣುತ್ತಿದೆ. ಅದು ವೈದ್ಯಕೀಯ ಕ್ಷೇತ್ರವನ್ನೂ ಬಿಟ್ಟಿಲ್ಲ ಎಂಬುದು ನೋವಿನ ಸಂಗತಿ. ನಾನು ನ್ಯಾಯಾಧೀಶನಾಗಿ ಕೆಲ ಪ್ರಕರಣಗಳನ್ನು ಗಮನಿಸಿದಂತೆ ಕೆಲ ವೈದ್ಯರು ನಕಲಿ ಪ್ರಮಾಣ ಪತ್ರ ನೀಡುವುದನ್ನು ಕಂಡಿದ್ದೇನೆ.
ಅಪಘಾತದ ಸಂದರ್ಭದಲ್ಲಿ ಏನೂ ಆಗದವನಿಗೆ ನಾಲ್ಕಾರು ಕಡೆ ಮೂಳೆ ಮುರಿದಿದೆ ಎಂದು ಪ್ರಮಾಣಪತ್ರ ನೀಡಿರುವ ಸಾಕಷ್ಟು ಪ್ರಕರಣಗಳನ್ನು ಕಂಡಿದ್ದೇನೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಸಮಾಜವನ್ನು ಸರಿದಾರಿಯಲ್ಲಿ ಕೊಂಡೊಯ್ಯವ ಜವಾಬ್ದಾರಿ ಎಲ್ಲರ ಮೇಲಿದೆ ಎಂಬುದನ್ನು ಯುವ ಪೀಳಿಗೆ ಅರಿಯಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಜೆಎಸ್ಎಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನ ಸಂಸ್ಥೆಯ ಉಪ ಕುಲಪತಿ ಡಾ.ಸುರೀಂದ್ರಸಿಂಗ್, ಕುಲಸಚಿವ ಡಾ.ಬಿ.ಮಂಜುನಾಥ್, ಪ್ರಾಂಶುಪಾಲ ಡಾ.ಬಸವನಗೌಡಪ್ಪ, ಡಾ.ಅರುಣ್, ಡಾ.ಚಂದ್ರಕುಮಾರ್ ಮುಂತಾದವರು ಹಾಜರಿದ್ದರು.
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…
ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…
ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…
ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…