ಜಿಲ್ಲೆಗಳು

ವೈದ್ಯಕೀಯ ಕ್ಷೇತ್ರದ ಸಹಾಯವಿಲ್ಲದೆ ಕ್ಲಿಷ್ಟಕರ ಪ್ರಕರಣ ಬಗೆಹರಿಯುವುದಿಲ್ಲ: ಉಪ ಲೋಕಾಯುಕ್ತ ಫಣೀಂದ್ರ

ಮೈಸೂರು: ನ್ಯಾಯಾಂಗಕ್ಕೆ ಸಂಬಂದಿಸಿದ ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ವೈದ್ಯಕೀಯ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. ವೈದ್ಯರ ನೆರವಿಲ್ಲದೆ ಕೆಲ ಪ್ರಕರಣಗಳು ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಉಪ ಲೋಕಾಯುಕ್ತ ಹಾಗೂ ನ್ಯಾಯಾಧೀಶರಾದ ಕೆ.ಎನ್. ಫಣೀಂದ್ರ  ಅಭಿಪ್ರಾಯಪಟ್ಟರು. ಫಣೀಂದ್ರ


ಶುಕ್ರವಾರ ನಗರದ ಬನ್ನಿಮಂಟಪದ ಬಳಿ ಇರುವ ಜೆಎಸ್‌ಎಸ್ ಔಷಧ ವಿಜ್ಞಾನ ಕಾಲೇಜಿನ ಫೋರೆನ್ಸಿಕ್ ವಿಭಾಗ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ‘ಕಮಲ್ಸಕಾನ್-೨೦೨೨’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಾಂಗ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಸಾಕಷ್ಟು ಸಂಬಂದವಿದೆ. ಕೊಲೆಯಂತಹ ಪ್ರಕರಣಗಳಲ್ಲಿ ಫೊರೆನ್ಸಿಕ್ ವಿಭಾಗದ ಪಾತ್ರ ಹೆಚ್ಚಿದೆ. ವಿಚಾರಣೆ ವೇಳೆ ವೈದ್ಯರು ನೀಡುವ ಹೇಳಿಕೆ ಹಾಗೂ ವರದಿಗಳು ಬಹಳ ಮಹತ್ವವನ್ನು ಪಡೆದುಕೊಳ್ಳುತ್ತವೆ ಎಂದು ಹೇಳಿದರು.
ವೈದ್ಯರಾಗುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನೀವು ಕಲಿತದ್ದನ್ನು ಸಮಾಜ ಸೇವೆಯಂತಹ ಉದ್ದೇಶಕ್ಕೆ ಬಳಸಿಕೊಂಡಲ್ಲಿ ನಿಮ್ಮ ವಿದ್ಯೆ ಸಾರ್ಥಕವಾಗುತ್ತದೆ. ದೇಶ ನಮಗೇನು ಮಾಡಿದೆ ಎನ್ನುವುದ ಬದಲು ದೇಶಕ್ಕೆ ನವು ಏನು ಕೊಡುಗೆ ನೀಡಿದ್ದೇವೆ ಎಂಬುದನ್ನು ಆಲೋಚಿಸಿದಲ್ಲಿ ಆತ ಉತ್ತಮ ಪ್ರಜೆ ಎನಿಸಿಕೊಳ್ಳುತ್ತಾನೆ. ಈ ನಿಟ್ಟಿನಲ್ಲಿ ನಿಮ್ಮ ವಿದ್ಯೆಯನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿ ಎಂದು ಕಿವಿಮಾತು ಹೇಳಿದರು.
ಇಂದು ಭ್ರಷ್ಟಾಚಾರ ಎಂಬುದು ಎಲ್ಲ ಕ್ಷೇತ್ರಗಳಲ್ಲಿ ಕಾಣುತ್ತಿದೆ. ಅದು ವೈದ್ಯಕೀಯ ಕ್ಷೇತ್ರವನ್ನೂ ಬಿಟ್ಟಿಲ್ಲ ಎಂಬುದು ನೋವಿನ ಸಂಗತಿ. ನಾನು ನ್ಯಾಯಾಧೀಶನಾಗಿ ಕೆಲ ಪ್ರಕರಣಗಳನ್ನು ಗಮನಿಸಿದಂತೆ ಕೆಲ ವೈದ್ಯರು ನಕಲಿ ಪ್ರಮಾಣ ಪತ್ರ ನೀಡುವುದನ್ನು ಕಂಡಿದ್ದೇನೆ.
ಅಪಘಾತದ ಸಂದರ್ಭದಲ್ಲಿ ಏನೂ ಆಗದವನಿಗೆ ನಾಲ್ಕಾರು ಕಡೆ ಮೂಳೆ ಮುರಿದಿದೆ ಎಂದು ಪ್ರಮಾಣಪತ್ರ ನೀಡಿರುವ ಸಾಕಷ್ಟು ಪ್ರಕರಣಗಳನ್ನು ಕಂಡಿದ್ದೇನೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಸಮಾಜವನ್ನು ಸರಿದಾರಿಯಲ್ಲಿ ಕೊಂಡೊಯ್ಯವ ಜವಾಬ್ದಾರಿ ಎಲ್ಲರ ಮೇಲಿದೆ ಎಂಬುದನ್ನು ಯುವ ಪೀಳಿಗೆ ಅರಿಯಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನ ಸಂಸ್ಥೆಯ ಉಪ ಕುಲಪತಿ ಡಾ.ಸುರೀಂದ್ರಸಿಂಗ್, ಕುಲಸಚಿವ ಡಾ.ಬಿ.ಮಂಜುನಾಥ್, ಪ್ರಾಂಶುಪಾಲ ಡಾ.ಬಸವನಗೌಡಪ್ಪ, ಡಾ.ಅರುಣ್, ಡಾ.ಚಂದ್ರಕುಮಾರ್ ಮುಂತಾದವರು ಹಾಜರಿದ್ದರು.

andolanait

Recent Posts

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

19 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

52 mins ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

2 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

3 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

4 hours ago