ಜಿಲ್ಲೆಗಳು

ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ: ಅಕ್ಕ ಎನ್ನುತ್ತಿದ್ದವನೇ ಕೊಲೆಗಾರ ಎಂದು ಆರೋಪಿಸಿದ ಪತಿ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವ ದೊರೆತ ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿದ್ದು, 10 ಸೆಕೆಂಡ್‌ನ ವಿಡಿಯೊ ಸಹ ಲಭ್ಯವಾಗಿದೆ.

ಈ ವಿಡಿಯೊದಲ್ಲಿ ಇಬ್ಬರು ದುಷ್ಕರ್ಮಿಗಳು ದೀಪಿಕಾಳ ಮೇಲೆ ಹಲ್ಲೆ ಮಾಡುತ್ತಿದ್ದಾರೆ, ಈ ವಿಡಿಯೊವನ್ನು ಪ್ರವಾಸಿಗರೊಬ್ಬರು ಚಿತ್ರಿಸಿ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ತ ದೀಪಿಕಾ ಪತಿ ಲೋಕೇಶ್‌ ಅದೇ ಗ್ರಾಮದ ನಿತೀಶ್‌ ಎಂಬಾತವ ವಿರುದ್ಧ ಆರೋಪ ಮಾಡಿದ್ದಾರೆ. ಆತ ತನ್ನನ್ನು ಅಣ್ಣ ಹಾಗೂ ತನ್ನ ಪತ್ನಿ ದೀಪಿಕಾಳನ್ನು ಅಕ್ಕ ಎಂದು ಮಾತನಾಡಿಸುತ್ತಿದ್ದ, ಅದು ಬಿಟ್ಟರೆ ಆತನಿಗೂ ತನ್ನ ಪತ್ನಿಗೂ ಯಾವುದೇ ಸ್ನೇಹವಿರಲಿಲ್ಲ ಎಂದೂ ಸಹ ಲೋಕೇಶ್‌ ತಿಳಿಸಿದ್ದಾರೆ.

ಶನಿವಾರ ( ಜನವರಿ 20 ) ಶಾಲೆ ಮುಗಿಸಿ ಬಂದ ನಂತರ ದೀಪಿಕಾ ಮೊಬೈಲ್‌ಗೆ ನಿತೀಶ್‌ ಮೊಬೈಲ್‌ನಿಂದ ಕರೆ ಬಂದಿದ್ದು ಪತ್ನಿ ದೀಪಿಕಾ ಶವ ಪತ್ತೆಯಾಗುತ್ತಿದ್ದಂತೆಯೇ ನಿತೀಶ್‌ ನಾಪತ್ತೆಯಾಗಿದ್ದಾನೆ, ಆತನೇ ಕೊಲೆಗಾರ ಎಂದು ಲೋಕೇಶ್‌ ಆರೋಪಿಸಿದ್ದಾರೆ. ಅತ್ತ ನಿತೀಶ್‌ ತನ್ನ ತಂದೆಗೆ ನನ್ನನ್ನು ಹುಡುಕಬೇಡಿ, ನಾನು ತಪ್ಪು ಮಾಡಿದ್ದೇನೆ, ಅಕ್ಕನ ಮದುವೆ ಮಾಡಿ ಎಂದು ಸಂದೇಶ ಕಳುಹಿಸಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

5 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

9 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

9 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

9 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

10 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

10 hours ago