ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವ ದೊರೆತ ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿದ್ದು, 10 ಸೆಕೆಂಡ್ನ ವಿಡಿಯೊ ಸಹ ಲಭ್ಯವಾಗಿದೆ.
ಈ ವಿಡಿಯೊದಲ್ಲಿ ಇಬ್ಬರು ದುಷ್ಕರ್ಮಿಗಳು ದೀಪಿಕಾಳ ಮೇಲೆ ಹಲ್ಲೆ ಮಾಡುತ್ತಿದ್ದಾರೆ, ಈ ವಿಡಿಯೊವನ್ನು ಪ್ರವಾಸಿಗರೊಬ್ಬರು ಚಿತ್ರಿಸಿ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ತ ದೀಪಿಕಾ ಪತಿ ಲೋಕೇಶ್ ಅದೇ ಗ್ರಾಮದ ನಿತೀಶ್ ಎಂಬಾತವ ವಿರುದ್ಧ ಆರೋಪ ಮಾಡಿದ್ದಾರೆ. ಆತ ತನ್ನನ್ನು ಅಣ್ಣ ಹಾಗೂ ತನ್ನ ಪತ್ನಿ ದೀಪಿಕಾಳನ್ನು ಅಕ್ಕ ಎಂದು ಮಾತನಾಡಿಸುತ್ತಿದ್ದ, ಅದು ಬಿಟ್ಟರೆ ಆತನಿಗೂ ತನ್ನ ಪತ್ನಿಗೂ ಯಾವುದೇ ಸ್ನೇಹವಿರಲಿಲ್ಲ ಎಂದೂ ಸಹ ಲೋಕೇಶ್ ತಿಳಿಸಿದ್ದಾರೆ.
ಶನಿವಾರ ( ಜನವರಿ 20 ) ಶಾಲೆ ಮುಗಿಸಿ ಬಂದ ನಂತರ ದೀಪಿಕಾ ಮೊಬೈಲ್ಗೆ ನಿತೀಶ್ ಮೊಬೈಲ್ನಿಂದ ಕರೆ ಬಂದಿದ್ದು ಪತ್ನಿ ದೀಪಿಕಾ ಶವ ಪತ್ತೆಯಾಗುತ್ತಿದ್ದಂತೆಯೇ ನಿತೀಶ್ ನಾಪತ್ತೆಯಾಗಿದ್ದಾನೆ, ಆತನೇ ಕೊಲೆಗಾರ ಎಂದು ಲೋಕೇಶ್ ಆರೋಪಿಸಿದ್ದಾರೆ. ಅತ್ತ ನಿತೀಶ್ ತನ್ನ ತಂದೆಗೆ ನನ್ನನ್ನು ಹುಡುಕಬೇಡಿ, ನಾನು ತಪ್ಪು ಮಾಡಿದ್ದೇನೆ, ಅಕ್ಕನ ಮದುವೆ ಮಾಡಿ ಎಂದು ಸಂದೇಶ ಕಳುಹಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…