ಜಿಲ್ಲೆಗಳು

ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ: ಅಕ್ಕ ಎನ್ನುತ್ತಿದ್ದವನೇ ಕೊಲೆಗಾರ ಎಂದು ಆರೋಪಿಸಿದ ಪತಿ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವ ದೊರೆತ ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿದ್ದು, 10 ಸೆಕೆಂಡ್‌ನ ವಿಡಿಯೊ ಸಹ ಲಭ್ಯವಾಗಿದೆ.

ಈ ವಿಡಿಯೊದಲ್ಲಿ ಇಬ್ಬರು ದುಷ್ಕರ್ಮಿಗಳು ದೀಪಿಕಾಳ ಮೇಲೆ ಹಲ್ಲೆ ಮಾಡುತ್ತಿದ್ದಾರೆ, ಈ ವಿಡಿಯೊವನ್ನು ಪ್ರವಾಸಿಗರೊಬ್ಬರು ಚಿತ್ರಿಸಿ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ತ ದೀಪಿಕಾ ಪತಿ ಲೋಕೇಶ್‌ ಅದೇ ಗ್ರಾಮದ ನಿತೀಶ್‌ ಎಂಬಾತವ ವಿರುದ್ಧ ಆರೋಪ ಮಾಡಿದ್ದಾರೆ. ಆತ ತನ್ನನ್ನು ಅಣ್ಣ ಹಾಗೂ ತನ್ನ ಪತ್ನಿ ದೀಪಿಕಾಳನ್ನು ಅಕ್ಕ ಎಂದು ಮಾತನಾಡಿಸುತ್ತಿದ್ದ, ಅದು ಬಿಟ್ಟರೆ ಆತನಿಗೂ ತನ್ನ ಪತ್ನಿಗೂ ಯಾವುದೇ ಸ್ನೇಹವಿರಲಿಲ್ಲ ಎಂದೂ ಸಹ ಲೋಕೇಶ್‌ ತಿಳಿಸಿದ್ದಾರೆ.

ಶನಿವಾರ ( ಜನವರಿ 20 ) ಶಾಲೆ ಮುಗಿಸಿ ಬಂದ ನಂತರ ದೀಪಿಕಾ ಮೊಬೈಲ್‌ಗೆ ನಿತೀಶ್‌ ಮೊಬೈಲ್‌ನಿಂದ ಕರೆ ಬಂದಿದ್ದು ಪತ್ನಿ ದೀಪಿಕಾ ಶವ ಪತ್ತೆಯಾಗುತ್ತಿದ್ದಂತೆಯೇ ನಿತೀಶ್‌ ನಾಪತ್ತೆಯಾಗಿದ್ದಾನೆ, ಆತನೇ ಕೊಲೆಗಾರ ಎಂದು ಲೋಕೇಶ್‌ ಆರೋಪಿಸಿದ್ದಾರೆ. ಅತ್ತ ನಿತೀಶ್‌ ತನ್ನ ತಂದೆಗೆ ನನ್ನನ್ನು ಹುಡುಕಬೇಡಿ, ನಾನು ತಪ್ಪು ಮಾಡಿದ್ದೇನೆ, ಅಕ್ಕನ ಮದುವೆ ಮಾಡಿ ಎಂದು ಸಂದೇಶ ಕಳುಹಿಸಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.

andolana

Recent Posts

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

3 mins ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

5 mins ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

7 mins ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

18 mins ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

35 mins ago

5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…

1 hour ago