ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವ ದೊರೆತ ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿದ್ದು, 10 ಸೆಕೆಂಡ್ನ ವಿಡಿಯೊ ಸಹ ಲಭ್ಯವಾಗಿದೆ.
ಈ ವಿಡಿಯೊದಲ್ಲಿ ಇಬ್ಬರು ದುಷ್ಕರ್ಮಿಗಳು ದೀಪಿಕಾಳ ಮೇಲೆ ಹಲ್ಲೆ ಮಾಡುತ್ತಿದ್ದಾರೆ, ಈ ವಿಡಿಯೊವನ್ನು ಪ್ರವಾಸಿಗರೊಬ್ಬರು ಚಿತ್ರಿಸಿ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ತ ದೀಪಿಕಾ ಪತಿ ಲೋಕೇಶ್ ಅದೇ ಗ್ರಾಮದ ನಿತೀಶ್ ಎಂಬಾತವ ವಿರುದ್ಧ ಆರೋಪ ಮಾಡಿದ್ದಾರೆ. ಆತ ತನ್ನನ್ನು ಅಣ್ಣ ಹಾಗೂ ತನ್ನ ಪತ್ನಿ ದೀಪಿಕಾಳನ್ನು ಅಕ್ಕ ಎಂದು ಮಾತನಾಡಿಸುತ್ತಿದ್ದ, ಅದು ಬಿಟ್ಟರೆ ಆತನಿಗೂ ತನ್ನ ಪತ್ನಿಗೂ ಯಾವುದೇ ಸ್ನೇಹವಿರಲಿಲ್ಲ ಎಂದೂ ಸಹ ಲೋಕೇಶ್ ತಿಳಿಸಿದ್ದಾರೆ.
ಶನಿವಾರ ( ಜನವರಿ 20 ) ಶಾಲೆ ಮುಗಿಸಿ ಬಂದ ನಂತರ ದೀಪಿಕಾ ಮೊಬೈಲ್ಗೆ ನಿತೀಶ್ ಮೊಬೈಲ್ನಿಂದ ಕರೆ ಬಂದಿದ್ದು ಪತ್ನಿ ದೀಪಿಕಾ ಶವ ಪತ್ತೆಯಾಗುತ್ತಿದ್ದಂತೆಯೇ ನಿತೀಶ್ ನಾಪತ್ತೆಯಾಗಿದ್ದಾನೆ, ಆತನೇ ಕೊಲೆಗಾರ ಎಂದು ಲೋಕೇಶ್ ಆರೋಪಿಸಿದ್ದಾರೆ. ಅತ್ತ ನಿತೀಶ್ ತನ್ನ ತಂದೆಗೆ ನನ್ನನ್ನು ಹುಡುಕಬೇಡಿ, ನಾನು ತಪ್ಪು ಮಾಡಿದ್ದೇನೆ, ಅಕ್ಕನ ಮದುವೆ ಮಾಡಿ ಎಂದು ಸಂದೇಶ ಕಳುಹಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…