ಜಿಲ್ಲೆಗಳು

ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ: ಅಕ್ಕ ಎನ್ನುತ್ತಿದ್ದವನೇ ಕೊಲೆಗಾರ ಎಂದು ಆರೋಪಿಸಿದ ಪತಿ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವ ದೊರೆತ ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿದ್ದು, 10 ಸೆಕೆಂಡ್‌ನ ವಿಡಿಯೊ ಸಹ ಲಭ್ಯವಾಗಿದೆ.

ಈ ವಿಡಿಯೊದಲ್ಲಿ ಇಬ್ಬರು ದುಷ್ಕರ್ಮಿಗಳು ದೀಪಿಕಾಳ ಮೇಲೆ ಹಲ್ಲೆ ಮಾಡುತ್ತಿದ್ದಾರೆ, ಈ ವಿಡಿಯೊವನ್ನು ಪ್ರವಾಸಿಗರೊಬ್ಬರು ಚಿತ್ರಿಸಿ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ತ ದೀಪಿಕಾ ಪತಿ ಲೋಕೇಶ್‌ ಅದೇ ಗ್ರಾಮದ ನಿತೀಶ್‌ ಎಂಬಾತವ ವಿರುದ್ಧ ಆರೋಪ ಮಾಡಿದ್ದಾರೆ. ಆತ ತನ್ನನ್ನು ಅಣ್ಣ ಹಾಗೂ ತನ್ನ ಪತ್ನಿ ದೀಪಿಕಾಳನ್ನು ಅಕ್ಕ ಎಂದು ಮಾತನಾಡಿಸುತ್ತಿದ್ದ, ಅದು ಬಿಟ್ಟರೆ ಆತನಿಗೂ ತನ್ನ ಪತ್ನಿಗೂ ಯಾವುದೇ ಸ್ನೇಹವಿರಲಿಲ್ಲ ಎಂದೂ ಸಹ ಲೋಕೇಶ್‌ ತಿಳಿಸಿದ್ದಾರೆ.

ಶನಿವಾರ ( ಜನವರಿ 20 ) ಶಾಲೆ ಮುಗಿಸಿ ಬಂದ ನಂತರ ದೀಪಿಕಾ ಮೊಬೈಲ್‌ಗೆ ನಿತೀಶ್‌ ಮೊಬೈಲ್‌ನಿಂದ ಕರೆ ಬಂದಿದ್ದು ಪತ್ನಿ ದೀಪಿಕಾ ಶವ ಪತ್ತೆಯಾಗುತ್ತಿದ್ದಂತೆಯೇ ನಿತೀಶ್‌ ನಾಪತ್ತೆಯಾಗಿದ್ದಾನೆ, ಆತನೇ ಕೊಲೆಗಾರ ಎಂದು ಲೋಕೇಶ್‌ ಆರೋಪಿಸಿದ್ದಾರೆ. ಅತ್ತ ನಿತೀಶ್‌ ತನ್ನ ತಂದೆಗೆ ನನ್ನನ್ನು ಹುಡುಕಬೇಡಿ, ನಾನು ತಪ್ಪು ಮಾಡಿದ್ದೇನೆ, ಅಕ್ಕನ ಮದುವೆ ಮಾಡಿ ಎಂದು ಸಂದೇಶ ಕಳುಹಿಸಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

12 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago