ಮೇಲುಕೋಟೆ: ಇಲ್ಲಿನ ಚೆಲುವನಾರಾಯಣಸ್ವಾಮಿ ಸಮೂಹ ದೇವಾಲಯಗಳಿಂದ ತ್ರೈಮಾಸಿಕ ಅವಧಿಯಲ್ಲಿ 42,02,955 ಲಕ್ಷ ರೂ. ಹುಂಡಿಕಾಣಿಕೆ ಸಂಗ್ರಹವಾಗಿದೆ.
ಮಂಗಳವಾರ ಯೋಗನರಸಿಂಹಸ್ವಾಮಿ ಮತ್ತು ಬುಧವಾರ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಹುಂಡಿಗಳನ್ನು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಸಮಕ್ಷಮದಲ್ಲಿ ತೆರೆದು ಎಣಿಕೆ ಮಾಡಲಾಯಿತು.
ಯೋಗಾನರಸಿಂಹಸ್ವಾಮಿ ಬೆಟ್ಟದ ದೇವಾಲಯದಲ್ಲಿ ೧೦,೩೯,೦೭೬ ರೂ., ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ೩೧,೬೩,೮೭೯ ರೂ. ಸೇರಿ ಒಟ್ಟು ೪೨,೦೨,೯೫೫ ರೂ. ನಗದು ೨೨ಗ್ರಾಂ ಚಿನ್ನ ೭೦೯ಗ್ರಾಂ ಬೆಳ್ಳಿ ಸಂಗ್ರವಾಗಿದೆ. ಪ್ರತಿ ಸಲಕ್ಕಿಂತ ಈ ಸಲ ಹುಂಡಿಯ ಕಾಣಿಕೆ ಸಂಗ್ರಹ ಹೆಚ್ಚಳವಾಗಿದೆ. ಹುಂಡಿಯ ಜೊತೆಗೆ ಇ-ಹುಂಡಿಯಲ್ಲೂ ಭಕ್ತರು ಕಾಣಿಕೆ ಸಲ್ಲಿಸಿದ್ದಾರೆ.
ಹುಂಡಿಗೆ ಭಕ್ತರು ಸುಲಭವಾಗಿ ಹೆಚ್ಚಿನ ಕಾಣಿಕೆ ಹಾಕಲು ಅನುವಾಗುವಂತೆ ಹುಂಡಿಗಳನ್ನು ಇಟ್ಟು ದೇವಾಲಯದ ಆದಾಯ ಹೆಚ್ಚಸಲು ಶ್ರಮಿಸಲಾಗುತ್ತದೆ ಎಂದು ಇಒ ಮಹೇಶ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹುಂಡಿ ಎಣಿಕೆಯಲ್ಲಿ ಸ್ಥಳೀಯ ಎಸ್ಬಿಐ ವ್ಯವಸ್ಥಾಪಕರು ಮತ್ತು ಸಿಬ್ಬಂದಿ, ಸ್ರೀತ್ತೃಶಕ್ತಿಸಂಘದ ಕಾರ್ಯಕರ್ತರು ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…