ಜಿಲ್ಲೆಗಳು

ಮೇಲುಕೋಟೆ ದೇವಾಲಯಗಳಲ್ಲಿ 42.02 ಹುಂಡಿ ಕಾಣಿಕೆ ಸಂಗ್ರಹ

ಮೇಲುಕೋಟೆ: ಇಲ್ಲಿನ ಚೆಲುವನಾರಾಯಣಸ್ವಾಮಿ ಸಮೂಹ ದೇವಾಲಯಗಳಿಂದ ತ್ರೈಮಾಸಿಕ ಅವಧಿಯಲ್ಲಿ  42,02,955  ಲಕ್ಷ ರೂ. ಹುಂಡಿಕಾಣಿಕೆ ಸಂಗ್ರಹವಾಗಿದೆ.

ಮಂಗಳವಾರ ಯೋಗನರಸಿಂಹಸ್ವಾಮಿ ಮತ್ತು ಬುಧವಾರ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಹುಂಡಿಗಳನ್ನು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಸಮಕ್ಷಮದಲ್ಲಿ ತೆರೆದು ಎಣಿಕೆ ಮಾಡಲಾಯಿತು.

ಯೋಗಾನರಸಿಂಹಸ್ವಾಮಿ ಬೆಟ್ಟದ ದೇವಾಲಯದಲ್ಲಿ ೧೦,೩೯,೦೭೬ ರೂ., ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ೩೧,೬೩,೮೭೯ ರೂ. ಸೇರಿ ಒಟ್ಟು ೪೨,೦೨,೯೫೫ ರೂ. ನಗದು ೨೨ಗ್ರಾಂ ಚಿನ್ನ ೭೦೯ಗ್ರಾಂ ಬೆಳ್ಳಿ ಸಂಗ್ರವಾಗಿದೆ. ಪ್ರತಿ ಸಲಕ್ಕಿಂತ ಈ ಸಲ ಹುಂಡಿಯ ಕಾಣಿಕೆ ಸಂಗ್ರಹ ಹೆಚ್ಚಳವಾಗಿದೆ. ಹುಂಡಿಯ ಜೊತೆಗೆ ಇ-ಹುಂಡಿಯಲ್ಲೂ ಭಕ್ತರು ಕಾಣಿಕೆ ಸಲ್ಲಿಸಿದ್ದಾರೆ.

ಹುಂಡಿಗೆ ಭಕ್ತರು ಸುಲಭವಾಗಿ ಹೆಚ್ಚಿನ ಕಾಣಿಕೆ ಹಾಕಲು ಅನುವಾಗುವಂತೆ ಹುಂಡಿಗಳನ್ನು ಇಟ್ಟು ದೇವಾಲಯದ ಆದಾಯ ಹೆಚ್ಚಸಲು ಶ್ರಮಿಸಲಾಗುತ್ತದೆ ಎಂದು ಇಒ ಮಹೇಶ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹುಂಡಿ ಎಣಿಕೆಯಲ್ಲಿ ಸ್ಥಳೀಯ ಎಸ್‌ಬಿಐ ವ್ಯವಸ್ಥಾಪಕರು ಮತ್ತು ಸಿಬ್ಬಂದಿ, ಸ್ರೀತ್ತೃಶಕ್ತಿಸಂಘದ ಕಾರ್ಯಕರ್ತರು ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

6 mins ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

36 mins ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

1 hour ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

1 hour ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

2 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

2 hours ago